ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರ ಸರಗಳ್ಳತನ (Chain snatching) ಮಾಡಿದ್ದಾರೆ. ಒಂದು ಪ್ರಕರಣದಲ್ಲಿ ಮಾಂಗಲ್ಯ ಸರದ ಸ್ವಲ್ಪ ಭಾಗ ಮಾತ್ರ ಕಳ್ಳನ ಪಾಲಾಗಿದೆ.
ಎಲ್ಲೆಲ್ಲಿ ಹೇಗಾಯ್ತು ಘಟನೆ?
ಪ್ರಕರಣ 1 : ರವೀಂದ್ರ ನಗರ
ಸೆ.11ರಂದು ಬೆಳಗ್ಗೆ 6.50ರ ಹೊತ್ತಿಗೆ ಶಿವಮೊಗ್ಗದ ರವೀಂದ್ರನಗರದ ರೈಲ್ವೆ ಹಳಿ ಪಕ್ಕದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸುಶೀಲಮ್ಮ ಎಂಬುವವರ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಬೈಕ್ನಲ್ಲಿ ಬಂದ ಸರಗಳ್ಳ ಸುಶೀಲಮ್ಮ ಅವರ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರ ಅಪಹರಿಸಿದ್ದಾನೆ. ₹1.50 ಲಕ್ಷ ಮೌಲ್ಯದ 25 ಗ್ರಾಂ ತೂಕದ ಮಾಂಗಲ್ಯ ಸರ ಕಳುವಾಗಿದೆ ಎಂದು ಆರೋಪಿಸಿದ್ದಾರೆ. ಮಾಂಗಲ್ಯ ಸರ ಎಳೆದಾಗ ಸುಶೀಲಮ್ಮ ಅವರ ಕುತ್ತಿಗೆ ಭಾಗದಲ್ಲಿ ತರಚಿದ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ 2 : ವೆಂಕಟೇಶನಗರ
ಸೆ.5ರ ರಾತ್ರಿ 8.50ರ ಹೊತ್ತಿಗೆ ವೆಂಕಟೇಶನ ನಗರ 3ನೇ ಅಡ್ಡರಸ್ತೆಯಲ್ಲಿ ಬಸವ ಕೇಂದ್ರದ ಸಮೀಪ ಜಯಂತಿ ಮಾಂಗಲ್ಯ ಸರ ಅಪಹರಣಕ್ಕೆ ಯತ್ನವಾಗಿದೆ. ತಮ್ಮ ಮನೆಯ ಹೊರಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಸರಗಳ್ಳ ಜಯಂತಿ ಅವರ ಕೊರಳಿಗೆ ಕೈ ಹಾಕಿದ್ದಾನೆ. ಈ ವೇಳ ಜಯಂತಿ ಅವರು ಸರವನ್ನು ಬಿಗಿಯಾಗಿ ಹಿಡಿದಿದ್ದರಿಂದ ಸ್ವಲ್ಪ ಭಾಗ ಮಾತ್ರ ಸರಗಳ್ಳನ ಪಾಲಾಗಿದೆ. ಸುಮಾರು ₹25 ಸಾವಿರ ಮೌಲ್ಯದ 5 ಗ್ರಾಂ ತೂಕದ ಒಂದು ಎಳೆಯನ್ನು ಮಾತ್ರ ಕಳ್ಳ ಕಸಿದುಕೊಳ್ಳಲು ಸಾಧ್ಯವಾಗಿದೆ ಎಂದು ಆರೋಪಿಸಲಾಗಿದೆ.
ಎರಡು ಪ್ರಕರಣದಲ್ಲಿಯು ಕಳ್ಳ ಕಪ್ಪು ಬಣ್ಣದ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಪ್ರಧಾನಿ ಮೋದಿ 75ನೇ ಜನ್ಮದಿನ, ಶಿವಮೊಗ್ಗ ಜಿಲ್ಲೆಯ ಏಳು ಕಡೆ ಆರೋಗ್ಯ ಶಿಬಿರ, ಎಲ್ಲೆಲ್ಲಿ ಯಾವಾಗ ನಡೆಯಲಿದೆ?
Chain snatching
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















