ಶಿವಮೊಗ್ಗ: ಕೆಂಚಪ್ಪ ಬಡಾವಣೆಯ ಅಂಗನವಾಡಿ ಸಮೀಪ ವಾಕಿಂಗ್ ಮಾಡುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು (Chain snatching) ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ
ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದ ಜಯಲಕ್ಷ್ಮಿ ಎಂಬುವವರನ್ನು ಹಿಂಬಾಲಿಸಿದ ಇಬ್ಬರು ಅಪರಿಚಿತರು, ಅವರ ಕೊರಳಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಜಯಲಕ್ಷ್ಮಿ ಅವರನ್ನು ಕೆಳಕ್ಕೆ ತಳ್ಳಿದ್ದು, ಅವರು ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರಿಂದ ಸರವು ತುಂಡಾಗಿದೆ.
ಕಳ್ಳರು ಅರ್ಧದಷ್ಟು ಸರವನ್ನು ಕಿತ್ತುಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಕಳುವಾದ ಚಿನ್ನದ ಸರದ ಮೌಲ್ಯ ₹1,80,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






