SHIVAMOGGA LIVE NEWS | 23 NOVEMBER 2023
SHIMOGA : ಬಸ್ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಕಳ್ಳತನದ ಮತ್ತೊಂದು ಪ್ರಕರಣ ವರದಿಯಾಗಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಸಾಗರದ ಪುಷ್ಪಾ ಅವರ ಬ್ಯಾಗ್ನಲ್ಲಿದ್ದ ಕಪ್ಪು ಪರ್ಸ್ ಕಳ್ಳತನವಾಗಿದೆ. ಅದರಲ್ಲಿ 1.50 ಲಕ್ಷ ರೂ. ಮೌಲ್ಯದ ಬಂಗಾರದ ಚೈನ್, 4 ಸಾವಿರ ರೂ ನಗದು ಮತ್ತು ಆಧಾರ್ ಕಾರ್ಡ್ ಇತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪುಷ್ಪಾ ಅವರು ಶಿವಮೊಗ್ಗದಲ್ಲಿ ಸಂಬಂಧಿಯೊಬ್ಬರ ಮನೆ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿ ಸಾಗರದಲ್ಲಿರುವ ಮನೆಗೆ ಹಿಂತಿರುಗುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾಗರದ ಬಸ್ ಹತ್ತಿ ಕಂಡಕ್ಟರ್ಗೆ ಆಧಾರ್ ಕಾರ್ಡ್ ತೋರಿಸಲು, ಪರ್ಸ್ ತೆಗೆಯಲು ಮುಂದಾದಾಗ ಕಳ್ಳತನ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200