ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HIGHLITES
- ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮಹಿಳೆಯ ಸರಗಳ್ಳತನ
- ವಿಳಾಸ ಕೇಳುವ ನೆಪದಲ್ಲಿ ನಡೆಯಿತು ಕೃತ್ಯ
- ಬೈಕ್ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕಳ್ಳತನ
SHIVAMOGGA LIVE NEWS | 4 APRIL 2024
SHIMOGA : ವಾಕಿಂಗ್ಗೆ ತೆರಳಿದ್ದ ಮಹಿಳೆಯೊಬ್ಬರ ಸರಗಳ್ಳತನ ಮಾಡಲಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ಕಳ್ಳರು ದುಷ್ಕೃತ್ಯ ಎಸಗಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಗೇಟ್ನಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಮಲ್ಲೇಶ್ವರನಗರದಲ್ಲಿ ಬೆಳಗ್ಗೆ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೈಕ್ನಲ್ಲಿ ಬಂದ ಇಬ್ಬರು ವಿಳಾಸ ಕೇಳುವ ನೆಪದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಒಬ್ಬಾತ ಬೈಕ್ನಿಂದ ಕೆಳಗಿಳಿದು ಮಹಿಳೆಯೊಬ್ಬರ ಕೊರಳಲ್ಲಿದ್ದ 30 ಗ್ರಾಂ ತೂಕದ ಬಂಗಾರದ ಸರ ಕಸಿದುಕೊಂಡಿದ್ದಾನೆ. ಇಬ್ಬರು ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಇನ್ನು, ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲೇಶ್ವರದ ನಗರದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆ ಮುಂದೆ ಘಟನೆ ಸಂಭವಿಸಿದೆ. ಅವರ ಮನೆ ಗೇಟ್ ಬಳಿ ಇರುವ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಈಶ್ವರಪ್ಪಗೆ ಭಾರಿ ನಿರಾಸೆ, ದೆಹಲಿಯಿಂದ ಶಿವಮೊಗ್ಗಕ್ಕೆ ಬರಿಗೈಲಿ ವಾಪಸ್, ಮುಂದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






