SHIVAMOGGA LIVE NEWS, 25 DECEMBER 2024
ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರದ ನಾಗರತ್ನ ಎಂಬುವವರ ಮಾಂಗಲ್ಯ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್ಡೇಟ್ ನೀಡಿದ ಸಂಸದ
ನಾಗರತ್ನ ತಮ್ಮ ಪತಿಯೊಂದಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ಊರಿಗೆ ತೆರಳುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಪ್ಲಾಟ್ಫಾರಂನಲ್ಲಿ ಬಸ್ ಹುತ್ತುವಾಗ ಜನ ದಟ್ಟಣೆ ಹೆಚ್ಚಿತ್ತು. ಈ ಸಂದರ್ಭ ಕೊರಳಲ್ಲಿದ್ದ ಮಾಂಗಲ್ಯ ಸರ ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 35 ಗ್ರಾಂ ತೂಕದ ಸುಮಾರು 1.22 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ