ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MAY 2024
SHIMOGA : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ (Officer) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು ಶಿವಮೊಗ್ಗಕ್ಕೆ ಆಗಮಿಸಿದೆ.
ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚಪ್ಪ ಲೇಔಟ್ನಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದ ಆರು ಮಂದಿ ತಂಡ ಆಗಮಿಸಿದೆ. ಮೃತ ಅಧಿಕಾರಿ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ.
ಪೆನ್ ಡ್ರೈವ್ ವಶಕ್ಕೆ
ಕುಟುಂಬದವರಿಂದ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು, ಚಂದ್ರಶೇಖರನ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಮನೆಯಲ್ಲಿದ್ದ ಪೆನ್ ಡ್ರೈವ್ ಒಂದನ್ನು ವಶಕ್ಕೆ ಪಡೆಯಲಾಗಿದೆ. ಅದರ ಮೇಲೆ ಪದ್ಮನಾಭ್ ಎಂದು ಬರೆದಿದೆ ಎನ್ನಲಾಗಿದೆ. ಇನ್ನು, ಪೆನ್ ಒಂದನ್ನು ವಶಕ್ಕೆಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಚಂದ್ರಶೇಖರನ್ ಪತ್ನಿ ಹೇಳಿದ್ದೇನು?
ಇನ್ನು, ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಚಂದ್ರಶೇಖರನ್ ಪತ್ನಿ ಕವಿತಾ, ಸಿಐಡಿ ಅಧಿಕಾರಿಗಳು ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೆನ್ ಡ್ರೈವ್ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಏನಿದೆ ಅನ್ನುವುದು ನಮಗೆ ತಿಳಿಯಬೇಕು. ಡೆತ್ ನೋಟ್ ಬರೆದ ಪೆನ್ ವಶಕ್ಕೆ ಪಡೆದುಕೊಂಡಿದ್ದಾರೆ. ಪತಿಯ ಸ್ವಭಾವದ ಕುರಿತು ಮಾಹಿತಿ ಕೇಳಿದರು. ಅವರು ದಕ್ಷ ಅಧಿಕಾರಿ ಅನ್ನುವುದು ಸಿಐಡಿ ಅವರಿಗು ಮನವರಿಕೆಯಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್ನಲ್ಲಿ ಹಾಡಹಗಲೆ ಮಹಿಳೆಗೆ ಮಂಕು ಕವಿಯುವಂತೆ ಮಾಡಿದ ಕಳ್ಳಿಯರು, ಮುಂದೇನಾಯ್ತು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















