SHIVAMOGGA LIVE NEWS | 2 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರೈಲ್ವೆ ಗೇಟ್ ತೆಗೆಯುವಂತೆ ರೈಲ್ವೆ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಅಲ್ಲದೆ ಅವರ ಬೈಕಿಗೆ ಬೆಂಕಿ ಹಚ್ಚಲಾಗಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯಡೇಹಳ್ಳಿ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ರೈಲು ಬರುವ ಸಂದರ್ಭ ಗೇಟ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಗೇಟ್ ಹಾಕಿದ್ದಾರೆ. ಆಗ ಬಂದ ಗಿರೀಶ್, ಬಾಲಿ, ಇಲಿಯಾಸ್, ರಫಿ ಮತ್ತಿತರರು ಗೇಟ್ ತೆಗೆಯುವಂತೆ ತಿಳಿಸಿದ್ದಾರೆ. ಮಹಿಳಾ ಸಿಬ್ಬಂದಿ ಇದಕ್ಕೆ ಒಪ್ಪದಿದ್ದಾಗ, ಅವಾಚ್ಯವಾಗಿ ನಿಂದಿಸಿದ್ದಾರೆ. ರಾತ್ರಿ 9.17ರ ಹೊರತ್ತಿಗೆ ಘಟನೆ ಸಂಭವಿಸಿದೆ.
ಮರುದಿನ ಬೆಳಗಿನ ಜಾವ 5.40ರ ಹೊತ್ತಿಗೆ ಯಡೇಹಳ್ಳಿ ರೈಲ್ವೆ ಬಳಿ ಮಹಿಳಾ ಸಿಬ್ಬಂದಿಯ ಬೈಕ್’ಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿ ನಂದಿಸುವ ಹೊತ್ತಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿತ್ತು.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






