ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ರೋಗಿಯನ್ನು ಕರೆದೊಯ್ಯುವ ವಿಚಾರವಾಗಿ ಇಬ್ಬರು ಆಂಬುಲೆನ್ಸ್ ಚಾಲಕರ ಮಧ್ಯೆ ಗಲಾಟೆಯಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಘಟನೆ ಸಂಭವಿಸಿದೆ. ಖಾಸಗಿ ಆಂಬಲೆನ್ಸ್ ಚಾಲಕರಾದ ಸಮೀರ್ ಮತ್ತು ಅಮರೇಶ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.
ಬಾಡಿಗೆ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಸಮೀರ್ ಎಂಬಾತ ಮರದ ಪೀಸ್ ತೆಗೆದುಕೊಂಡು ಅಮರೇಶ್ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೆ ಕೊಲೆ ಬೆದರಿಕೆಯನ್ನು ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಅಮರೇಶ್, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY, CRIME DIARY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

