SHIVAMOGGA LIVE NEWS | 17 APRIL 2023
SHIMOGA : ಮಕ್ಕಳ ಬಟ್ಟೆ ಸೈಸ್ ವ್ಯತ್ಯಾಸವಾಗಿದ್ದು ಬದಲು ಮಾಡಿಕೊಡುವಂತೆ ಬಂದ ಗ್ರಾಹಕ ಮತ್ತು ಅಂಗಡಿ (Shop) ಮಾಲೀಕನ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಗಾಂಧಿ ಬಜಾರ್ನ ಬಟ್ಟೆ ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಅಂಗಡಿಯೊಂದರಲ್ಲಿ (Shop) ಅಬ್ದುಲ್ ಖಾದರ್ ಅವರ ಮನೆಯ ಮಕ್ಕಳಿಗೆ ಬಟ್ಟೆ ಖರೀದಿಸಲಾಗಿತ್ತು. ಆದರೆ ಮನೆಗೆ ಕೊಂಡೊಯ್ದಾಗ ಸೈಸ್ ವ್ಯತ್ಯಸವಾಗಿತ್ತು. ಮರುದಿನ ಬಟ್ಟೆ ಬದಲಾಯಿಸಿಕೊಂಡು ಹೋಗಲು ಅಬ್ದುಲ್ ಖಾದರ್ ಮತ್ತು ಅವರ ಸೊಸೆ ಬಂದಿದ್ದರು. ಈ ವೇಳೆ ಅಂಗಡಿ ಮಾಲೀಕ ಮತ್ತು ಅಬ್ದುಲ್ ಖಾದರ್ ಅವರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಇದನ್ನೂ ಓದಿ – ಕಂಬದ ಮೇಲೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಕೆಳಗೆ ಬಿದ್ದು ಸಾವು, ಶಿವಮೊಗ್ಗದಲ್ಲಿ ಪ್ರಕರಣ ದಾಖಲು
ಅಂಗಡಿ ಮಾಲೀಕ ಮತ್ತು ಅಂಗಡಿಯಲ್ಲಿ ಇದ್ದವರು ಅಬ್ದುಲ್ ಖಾದರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200