ಶಿವಮೊಗ್ಗ ಲೈವ್
ಶಿವಮೊಗ್ಗ: ₹150 ಹಣಕ್ಕಾಗಿ (Money) ಗುಜರಿ ಆಯುವವರ ಮಧ್ಯೆ ಗಲಾಟೆಯಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಇಬ್ಬರು ಬಡಿದಾಡಿಕೊಂಡಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ಮಧುಸೂದನ ಗಾಯಗೊಂಡಿದ್ದಾರೆ. ರವಿನಾಯ್ಕ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ರವಿನಾಯ್ಕನು ಮಧುಸೂದನನಿಂದ ₹150 ಹಣ ಪಡೆದಿದ್ದ. ಆ ಹಣವನ್ನು ಹಿಂತಿರುಗಿಸುವಂತೆ ಮಧುಸೂದನ ಕೇಳಿದಾಗ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ. ರವೀನಾಯ್ಕ ತನ್ನ ಬಳಿ ಇದ್ದ ದೊಣ್ಣೆಯಿಂದ ರಕ್ತ ಬರುವಂತೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?
