ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ (status) ಪ್ರಕಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಸಮಿತಿ ವತಿಯಿಂದ ಆಗ್ರಹಿಸಲಾಯಿತು.

ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ನಿಯೋಗ, ಪಾಕಿಸ್ತಾನದ ಪರವಾಗಿ ಪೋಸ್ಟ್ ಪ್ರಕಟಿಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

120525-SN-Channabasappa-visits-kote-police-station.webp

SLV-BOOK-SHOP-SHIMOGA

ಎಂಎಲ್‌ಎ ಹೇಳಿದ್ದೇನು?

ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗದಲ್ಲಿ ದೇಶದ್ರೋಹಿಗಳಿದ್ದಾರೆ ಎಂದು ಹೇಳುತ್ತಿದ್ದೆವು. ಈಗ ಕೋಟೆ ಮತ್ತು ತುಂಗಾ ನಗರ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

120525-SN-Channabasappa-visits-kote-police-station.webp

ಪಾಕಿಸ್ತಾನಕ್ಕೆ ಒಳ್ಳೆಯದಾಗಲಿ ಎಂದು ಅಲ್ಲಾಹುವಿನಲ್ಲಿ ಬೇಡಿಕೊಂಡು ವಾಟ್ಸಪ್ ಸ್ಟೇಟಸ್ ಹಾಕಿದ್ದಾರೆ. ದೇಶದ್ರೋಹಿಗಳಿಗೆ ಅಲ್ಲ ಮತ್ತು ರಾಮ ಯಾರು ಸಹಕಾರ ನೀಡಬಾರದು. ದೇಶದ್ರೋಹಿಗಳ ಕುಟುಂಬವನ್ನು ಹುಡುಕಿ ತಕ್ಕ ಶಾಸ್ತಿ ಮಾಡಬೇಕು. ರಕ್ಷಣಾಧಿಕಾರಿಗಳು ತಕ್ಕ ಕ್ರಮ ಕೈಗೊಳ್ಳಬೇಕು.

– ಎಸ್.ಎನ್.ಚನ್ನಬಸಪ್ಪ, ಶಾಸಕ

BJP city team meets Kote Station inspector Harish K Patel.

ಪ್ರಮುಖರಾದ ಎಸ್.ದತ್ತಾತ್ರಿ, ದೀನದಯಾಳು, ಮೋಹನ್ ರೆಡ್ಡಿ, ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಇದ್ದರು.

JNNCE-ADMISSION-2025-26

ಏನಿದು ಪ್ರಕರಣ?

ಶಿವಮೊಗ್ಗದ ನಿವಾಸಿ ಇಬ್ರಾಹಿಂ ಎಂಬಾತ ವಾಟ್ಸಪ್‌ನಲ್ಲಿ ಪಾಕಿಸ್ತಾನದ ಪರವಾಗಿ ಸ್ಟೇಟಸ್ ಪ್ರಕಟಿಸಿದ್ದ ಎಂದು ಆರೋಪಿಸಲಾಗಿದೆ. ಪಾಕಿಸ್ತಾನವನ್ನು ರಕ್ಷಿಸುವಂತೆ ಅಲ್ಲಾಹುವಿನಲ್ಲಿ ಬೇಡಿಕೊಳ್ಳುವ ರೀತಿ ಪೋಸ್ಟ್‌ ಹಾಕಲಾಗಿದೆ ಎಂದು ಪ್ರಕರಣ ದಾಖಲಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 12, 2025 at 12:53 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 12, 2025

Leave a Comment