SHIMOGA NEWS, 9 NOVEMBER 2024 : ಕುಂಸಿ ಮೆಸ್ಕಾಂ ಮೇಸ್ತ್ರಿ ನಂದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಐವರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ (Complaint) ದಾಖಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಸತಿಗೃಹದಲ್ಲಿ ನಂದೀಶ್ ಆತ್ಮಹತ್ಯೆ
ಕುಂಸಿಯ ಮೆಸ್ಕಾಂ ಕಚೇರಿಯಲ್ಲಿ ಗ್ರೇಡ್ -2 ಮೇಸ್ತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ.ನಂದೀಶ್ (38) ವಸತಿ ಗೃಹದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಶುಕ್ರವಾರ ನಂದೀಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು.
ಐವರ ವಿರುದ್ಧ ಪ್ರಕರಣ ದಾಖಲು
ಪ್ರಕರಣ ಸಂಬಂಧ ಕಚೇರಿಯ ಯುವರಾಜ್ ಸೇರಿ ಹಲವರ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಸ್ಕಾಂ ಗುತ್ತಿಗೆದಾರ ವಿಜಯ್ಕುಮಾರ, ಜಗದೀಶ್, ರವಿ, ಯುವರಾಜ್ ಹಾಗೂ ಯುವರಾಜ್ನ ಸಂಬಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ ಏನು?
ಹೊರಗುತ್ತಿಗೆ ಕೆಲಸಕ್ಕೆಂದು ಯುವರಾಜ ಎಂಬುವವರನ್ನು ಗುತ್ತಿಗೆದಾರ ವಿಜಯ್ಕುಮಾರ್ ಕರೆತಂದಿದ್ದರು. ಆತನನ್ನು ನಂದೀಶ್ ವಿದ್ಯುತ್ ದುರಸ್ಥಿ ಕಾರ್ಯಕ್ಕೆ ಕರೆದೊಯ್ದಾಗ ವಿದ್ಯುತ್ ತಗುಲಿ ಗಾಯಗೊಂಡಿದ್ದರು. ಯುವರಾಜ್ಗೆ ಚಿಕಿತ್ಸೆ ವೆಚ್ಚವನ್ನು ನಂದೀಶ್ ಭರಿಸಿದ್ದರು. ಆದರೆ ಹೆಚ್ಚಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ನಂದೀಶ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪತ್ನಿ ನೀಡಿದ ದೂರಿನ ಆಧಾರದಲ್ಲಿ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನೆಹರು ಸ್ಟೇಡಿಯಂಗೆ ಹಿಂತಿರುಗಿದ ವಕೀಲರಿಗೆ ಕಾದಿತ್ತು ಆಘಾತ – 3 ಫಟಾಫಟ್ ಸುದ್ದಿ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





