SHIVAMOGGA LIVE NEWS | 10 APRIL 2024
BHADRAVATHI : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣೆಗೆ ಸ್ಪರ್ಧೆ ವಿಚಾರ ಬಿಜೆಪಿಯೊಳಗೆ ಕಾರ್ಯಕರ್ತರ ಹಂತದಲ್ಲಿ ಗೊಂದಲ ಸೃಷ್ಟಿಸಿದೆ. ಈ ಮಧ್ಯೆ ಇದು ವೈಯಕ್ತಿಕ ಪ್ರತಿಷ್ಠೆಯ ಹಂತಕ್ಕೆ ತಲುಪಿದ್ದು, ಭದ್ರಾವತಿಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ದೂರು : ಮಂಡಲ ಅಧ್ಯಕ್ಷರ ಅವಹೇಳನ
ಈಶ್ವರಪ್ಪ ನಡೆ ಹಿಂದೂಗಳ ಕಡೆ ಎಂಬ ವಾಟ್ಸಪ್ ಗ್ರೂಪ್ನಲ್ಲಿ ಬಿಜೆಪಿ ಭದ್ರಾವತಿ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಧರ್ಮಪ್ರಸಾದ್ ಅವರು ಚಂದನ್ ರಾವ್ ಎಂಬುವವರ ವಿರುದ್ಧ ದೂರು ನೀಡಿದ್ದಾರೆ.
ಪ್ರತಿದೂರು : ಫೋನ್ ಮಾಡಿ ಕೊಲೆ ಬೆದರಿಕೆ
ಇತ್ತ ಚಂದನ್ ರಾವ್ ಅವರು ಬಿಜೆಪಿ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್ ಅವರ ವಿರುದ್ಧ ಪ್ರತಿ ದೂರು ನೀಡಿದ್ದಾರೆ. ಧರ್ಮಪ್ರಸಾದ್ ಅವರು ತನಗೆ ಕರೆ ಮಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಚಂದನ್ ರಾವ್ ಆಪಾದಿಸಿದ್ದಾರೆ.
ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಮನೆಯಲ್ಲಿ ಕುಳಿತು ಸುಲಭವಾಗಿ ಹಣ ಸಂಪಾದನೆ, ಶಿವಮೊಗ್ಗದ ವ್ಯಕ್ತಿ ಕೊನೆಗೆ ಗಳಿಸಿದ್ದೆಷ್ಟು? ಕಳೆದುಕೊಂಡಿದ್ದೆಷ್ಟು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200