SHIVAMOGGA LIVE NEWS | 1 NOVEMBER 2023
SHIMOGA : ಮುಂಗಡ ಬುಕ್ಕಿಂಗ್ ಮಾಡಿದರೂ ನಿಗದಿತ ಸಮಯಕ್ಕೆ ಕಾರು ಡೆಲೆವರಿ ನೀಡದೆ, ಬುಕ್ಕಿಂಗ್ ಹಣ ಮರಳಿಸದೆ ಸತಾಯಿಸಿದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪರಿಹಾರ ನೀಡುವಂತೆ ಕಾರ್ ಶೋ ರೂಂ (Car Showroom) ಒಂದಕ್ಕೆ ಆದೇಶಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬುಕ್ಕಿಂಗ್ ಮಾಡಿದ್ದರು ಕಾರು ಕೊಡಲಿಲ್ಲ
ನಗರದ ವೈ.ಎಲ್.ರವಿಕುಮಾರ್ ಎಂಬುವರು ಶಿವಮೊಗ್ಗದ ಪ್ರತಿಷ್ಠಿತ ಕಾರು ಶೋರೂಮ್ನಲ್ಲಿ ಸ್ಕಾರ್ಪಿಯೋ ಎನ್ಝಡ್ 6 ಡೀಸೆಲ್ ಎಂಟಿ ಬಿಳಿ ಬಣ್ಣದ ಕಾರು ಖರೀದಿಗೆ 21 ಸಾವಿರ ರೂ. ಪಾವತಿಸಿದ್ದರು. 2023ರ ಆಗಸ್ಟ್ 6ರಂದು ಬುಕ್ಕಿಂಗ್ ಮಾಡಿದ್ದರು. ಆದರೆ ಉತ್ಪಾದನಾ ಘಟಕದಲ್ಲಿ ತೊಂದರೆ ಉಂಟಾಗಿದೆ ಎಂದು ಕಾರಣ ನೀಡಿ ಸಂಸ್ಥೆ ಕಾರು ನೀಡಿರಲಿಲ್ಲ. ಮುಂಗಡ ಹಣವನ್ನೂ ಮರಳಿಸಿರಲಿಲ್ಲ.
ಆಯೋಗದ ಮುಂದೆ ಪರಿಹಾರಕ್ಕೆ ಮನವಿ
ಈ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸೂಕ್ತ ಪರಿಹಾರ ಕೋರಿ ರವಿಕುಮಾರ್ ಅವರು ಪ್ರಕರಣ ದಾಖಲಿಸಿದ್ದರು. ಆಯೋಗದಿಂದ ಜಾರಿಗೊಳಿಸಿದ ನೋಟಿಸ್ಗೆ ಎದುರುದಾರರು ಕಲಾಪಕ್ಕೆ ಹಾಜರಾಗಿರದ ಕಾರಣ ಏಕಪಕ್ಷೀಯವಾಗಿ ಆದೇಶಿಸಲಾಗಿದೆ. ಪ್ರಕರಣದ ಅಂಶಗಳು ಮತ್ತು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಗಣಿಸಿ, ಪರಿಶೀಲಿಸಿದಾಗ ಎದುರುದಾರರ ಸೇವಾ ನೂನ್ಯತೆ ಕಂಡುಬಂದಿದ್ದು ಪ್ರಸ್ತುತ ಪ್ರಕರಣವನ್ನು ಭಾಗಶಃ ಪುರಸ್ಕರಿಸಲಾಗಿದೆ.
ದಂಡ ವಿಧಿಸಿದ ಆಯೋಗ
ಎದುರುದಾರರು ದೂರುದಾರರಿಂದ ಪಡೆದ ಮುಂಗಡ ಹಣ 21 ಸಾವಿರ ರೂ.ಗಳನ್ನು ಶೇ.9 ಬಡ್ಡಿ ಸಮೇತ ಪಾವತಿಸಬೇಕು. ಮಾನಸಿಕ ಹಿಂಸೆ ಹಾಗೂ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಹಾರವಾಗಿ 10 ಸಾವಿರ ರೂ., ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು 10 ಸಾವಿರ ರೂ. ಪಾವತಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ. ಪಟ್ಟಣಶೆಟ್ಟಿ ಮತ್ತು ಬಿ.ಡಿ.ಯೋಗಾನಂದ ಅವರು ಪೀಠವು ಆದೇಶಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ