SHIVAMOGGA LIVE NEWS | 26 APRIL 2023
BHADRAVATHI : ಕ್ಷುಲಕ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದ್ದು ಭದ್ರಾವತಿಯಲ್ಲಿ ದೂರು ಪ್ರತಿದೂರು (Counter Complaint) ದಾಖಲಾಗಿದೆ. ಓರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಭದ್ರಾವತಿಯ ಭೂತನಗುಡಿ ನೇತಾಜಿ ಆಟೋ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಜಬಿ ಮತ್ತು ಸಂಜಯ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫೋಟೊಗ್ರಾಫರ್ ಕೃಷ್ಣಮೂರ್ತಿ ಎಂಬಾತ ದೂರು ನೀಡಿದ್ದಾರೆ. ರಾತ್ರಿ 11.30ಕ್ಕೆ ಆಟೋ ನಿಲ್ದಾಣದ ಬಳಿ ನಿಂತಿದ್ದಾಗ ಅಲ್ಲಿಗೆ ಬಂದ ಜಬಿ ಮತ್ತು ಸಂಜಯ್ ಜೋರಾಗಿ ಕೂಗಾಡುತ್ತ ಬಂದು ತನ್ನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಕೊಲೆ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.
ಇನ್ನು, ಸಂಜಯ್ ಪ್ರತಿದೂರು (Counter Complaint) ನೀಡಿದ್ದು, ಸೊಳ್ಳೆ ಬತ್ತಿ ತರಲು ಜಬಿ ಜೊತೆಗೆ ರಾತ್ರಿ 11.30ರ ಹೊತ್ತಿಗೆ ಅಂಗಡಿಗೆ ತೆರಳುತ್ತಿದ್ದೆ. ಆಗ ಕೃಷ್ಣ ಮತ್ತು ಇತರರು ತಮ್ಮನ್ನು ಹತ್ತಿರ ಕರೆದು ಬೆದರಿಕೆ ಒಡ್ಡಿದ್ದಾರೆ. ಚಾಕುವಿನಿಂದ ಚುಚ್ಚಲು ಮುಂದಾದರು. ತಪ್ಪಿಸಿಕೊಳ್ಳುವಾಗ ಕೈಗೆ ಚಾಕು ಚುಚ್ಚಿದೆ. ಇದೆ ವೇಳೆ ತಮ್ಮ ಮೇಲೆ ಹಲ್ಲೆಯಾಗಿದೆ. ಜೀವ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ದೂರು ನೀಡಿದ್ದಾನೆ.
ಇದನ್ನೂ ಓದಿ – ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ
ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200