ಶಿವಮೊಗ್ಗ: ನಗರದ ಸೋಮಿನಕೊಪ್ಪದಲ್ಲಿ ಮನೆಯ ಮುಂದೆ ಕಟ್ಟಿಹಾಕಿದ್ದ ಹಸುವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಸೋಮಿನಕೊಪ್ಪ ನಿವಾಸಿ, ರೈತ ಶೇಖ್ ಅಯಾಜ್ ಎಂಬುವವರು ತಮ್ಮ ಹಸುಗಳನ್ನು ಮೇಯಿಸಿಕೊಂಡು ಬಂದು ಮನೆಯ ಪಕ್ಕದ ರಸ್ತೆಯಲ್ಲಿ ಕಟ್ಟಿಹಾಕಿದ್ದರು. ಮರುದಿನ ಮುಂಜಾನೆ 4 ಗಂಟೆಗೆ ಎದ್ದು ನೋಡಿದಾಗ ಕಟ್ಟಿಹಾಕಿದ್ದ ಹಸುಗಳಲ್ಲಿ ₹60,000 ಮೌಲ್ಯದ ಬಿಳಿ ಬಣ್ಣದ ಹಸುವೊಂದು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಕಾಣೆಯಾದ ಹಸುವಿಗಾಗಿ ಸುತ್ತಮುತ್ತಲಿನ ಎಲ್ಲ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಹಸುವಿನ ಸುಳಿವು ಸಿಗಲಿಲ್ಲ. ಈ ಹಿನ್ನೆಲೆ ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

