| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 JANUARY 2021
ಬ್ಯಾಂಕ್ನಿಂದ ಕರೆ ಮಾಡುತ್ತಿರುವುದಾಗಿ ನಂಬಸಿ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಗೆ ಖದೀರಿಮರು ಕನ್ನಾ ಹಾಕಿದ್ದಾರೆ. ಭದ್ರಾವತಿಯ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಅಕೌಂಟ್ನಿಂದ 1.10 ಲಕ್ಷ ರೂ. ಲಪಟಾಯಿಸಲಾಗಿದೆ.
ಭದ್ರಾವತಿಯ ಎಂ.ಎಂ.ಕಾಂಪೌಂಡ್ನ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಒಮ್ಮೆ 80 ಸಾವಿರ ರೂ. ಮತ್ತೊಮ್ಮೆ 30 ಸಾವಿರ ಹಣವನ್ನು ಲಪಟಾಯಿಸಲಾಗಿದೆ.
ಇದನ್ನೂ ಓದಿ | ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಭದ್ರಾವತಿಯ ವ್ಯಕ್ತಿಗೆ ಒಂದು ಲಕ್ಷ ರೂ. ವಂಚನೆ
ಖದೀಮರ ಕೈ ಚಳಕ ಹೇಗಿತ್ತು?
ಈ ಮಹಿಳೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ರೆಡಿಟ್ ಕಾರ್ಡ್ ಸೇವೆ ಒದಗಿಸಿತ್ತು.
ಕ್ರೆಡಿಟ್ ಕಾರ್ಡ್ ಬರುವ ಮೊದಲೆ ಖದೀಮರಿಗೆ ಅದರ ಮಾಹಿತಿ ಲಭ್ಯವಾಗಿತ್ತು. ನಾಲ್ಕು ಬೇರೆ ಬೇರೆ ಮೊಬೈಲ್ ನಂಬರ್ಗಳಿಂದ ಕರೆ ಮಾಡಿ, ಕ್ರೆಡಿಟ್ ಕಾರ್ಡ್ ತಲುಪಿದೆಯೇ ಎಂದು ವಿಚಾರಿಸಿಕೊಂಡಿದ್ದರು.
ಇದನ್ನೂ ಓದಿ | ಹಣ ಡ್ರಾ ಮಾಡಿಲ್ಲ, ಆನ್ಲೈನ್ ವ್ಯವಹಾರವು ಆಗಿಲ್ಲ, ಆದರೂ ಉದ್ಯಮಿಯ ಖಾತೆಯಿಂದ 83 ಸಾವಿರ ಮಾಯ
ಮಹಿಳೆಗೆ ಕ್ರಿಡಿಟ್ ಕಾರ್ಡ್ ತಲುಪಿದ ಬಳಿಕವು ಕರೆ ಮಾಡಿದ ಖದೀಮರು, ತಾವು ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದರು. ನಿಮ್ಮ ಕ್ರೆಡಿಟ್ ಲಿಮಿಟ್ ಹೆಚ್ಚಳ ಮಾಡಬೇಕು. ಇಲ್ಲವಾದಲ್ಲಿ ಕಾರ್ಡ್ ಕ್ಯಾನ್ಸಲ್ ಆಗಲಿದೆ ಎಂದು ಬೆದರಿಸಿದರು.
ಕ್ರೆಡಿಟ್ ಲಿಮಿಟ್ ಹೆಚ್ಚಳ ಮಾಡುವುದಾಗಿ ನಂಬಿಸಿ ಒಟಿಪಿ ಪಡೆದ ಖದೀಮರು, ಎಂಎಸ್ಡಬ್ಲು ಷಾ ಎಂಟರ್ಪ್ರೈಸಸ್ ಹೆಸರಿಗೆ ಮೊದಲಿಗೆ 80 ಸಾವಿರ ರೂ. ಹಣ ಡ್ರಾ ಮಾಡಿದ್ದಾರೆ. ಮತ್ತೊಮ್ಮೆ ಅದೇ ಸಂಸ್ಥೆಯ ಹೆಸರಿಗೆ 30 ಸಾವಿರ ರೂ. ಹಣ ಡ್ರಾ ಮಾಡಿದ್ದಾರೆ.
ಕ್ರೆಡಿಟ್ ಕಾರ್ಡ್ನಿಂದ 1.10 ಲಕ್ಷ ರೂ. ಹಣ ಡ್ರಾ ಆಗಿರುವ ಮೆಸೇಜು ಬಂದ ಹಿನ್ನೆಲೆ, ಮಹಿಳೆ ಬ್ಯಾಂಕನ್ನು ಸಂಪರ್ಕಿಸಿದ್ದಾರೆ.
ವಂಚನೆಗೊಳಗಾದ ವಿಚಾರ ಅರಿವಿಗೆ ಬರುತ್ತಿದ್ದಂತೆ ಭದ್ರಾವತಿ ಓಲ್ಡ್ ಟೌನ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()