Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಂಜೆ 7 ಗಂಟೆಗೆ ಬಂದ ಮೆಸೇಜ್‌ನಿಂದ ಫಜೀತಿಗೆ ಸಿಲುಕಿದ ರೈತ, ಶಿವಮೊಗ್ಗದ ಪೊಲೀಸ್‌ ಠಾಣೆಗೆ ದೌಡು

ಸಂಜೆ 7 ಗಂಟೆಗೆ ಬಂದ ಮೆಸೇಜ್‌ನಿಂದ ಫಜೀತಿಗೆ ಸಿಲುಕಿದ ರೈತ, ಶಿವಮೊಗ್ಗದ ಪೊಲೀಸ್‌ ಠಾಣೆಗೆ ದೌಡು

22/05/2023 9:20 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 22 MAY 2023

SHIMOGA : ಕೆನರಾ ಬ್ಯಾಂಕ್‌ ಕಸ್ಟಮರ್‌ ಕೇರ್‌ (customer care) ಅಧಿಕಾರಿ ಎಂದು ನಂಬಿಸಿ ರೈತರೊಬ್ಬರಿಗೆ 1.85 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

24 ಗಂಟೆಯ ಗುಡುವಿನ ಮೆಸೇಜ್‌

ಸೊರಬ ತಾಲೂಕಿನ ರೈತರೊಬ್ಬರ ಮೊಬೈಲ್‌ಗೆ ಮೇ 18ರಂದು ಸಂಜೆ 7 ಗಂಟೆಗೆ ಕೆನರಾ ಬ್ಯಾಂಕ್‌ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಲಿಂಕ್‌ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ನಿಮ್ಮ ಖಾತೆ ಬ್ಲಾಕ್‌ ಅಗಲಿದೆ. ಎಟಿಎಂ ಕಾರ್ಡ್‌ ಅವಧಿಯು ಮುಗಿಯಲಿದೆ ಎಂದು ಎಚ್ಚರಿಸಲಾಗಿತ್ತು. ಕೂಡಲೆ ಕಸ್ಟಮರ್‌ ಕೇರ್‌ (customer care) ನಂಬರ್‌ಗೆ ಕರೆ ಮಾಡಿ ಎಂದು ತಿಳಿಸಲಾಗಿತ್ತು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಕೆಲವೇ ಹೊತ್ತಲ್ಲಿ ಹಣ ಮಾಯ

ಕೆನರಾ ಬ್ಯಾಂಕಿನಿಂದಲೇ ಮಸೇಜ್‌ ಬಂದಿರಬೇಕು ಎಂದು ನಂಬಿದ ರೈತ, ಕಸ್ಟಮರ್‌ ಕೇರ್‌ ನಂಬರ್‌ಗೆ ಕರೆ ಮಾಡಿದ್ದಾರೆ. ಕಸ್ಟಮರ್‌ ಕೇರ್‌ ಅಧಿಕಾರಿ ಸೋಗಿನಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಬ್ಯಾಂಕ್‌ ಖಾತೆಯ ವಿವರಗಳು, ಒಟಿಪಿ ನಂಬರ್‌ ಪಡೆದುಕೊಂಡಿದ್ದಾನೆ. ಇದಾಗಿ ಕೆಲವೇ ಹೊತ್ತಿನಲ್ಲಿ ರೈತನ ಖಾತೆಯಲ್ಲಿದ್ದ 1.85 ಲಕ್ಷ ರೂ. ಹಣ ಡ್ರಾ ಆಗಿರುವುದಾಗಿ ರೈತನ ಮೊಬೈಲ್‌ಗೆ ಮೆಸೇಜ್‌ ಬಂದಿದೆ. ಆತಂಕಗೊಂಡ ರೈತ, ತನ್ನ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನಿಮಗು ಬರಬಹುದು ಇಂತಹ ಮೆಸೇಜ್‌

ಬ್ಯಾಂಕ್‌ ಹೆಸರಿನಲ್ಲಿ ಮೆಸೇಜ್‌ ಕಳುಹಿಸಿ ಜನರನ್ನು ಗಲಿಬಿಲಿಗೊಳಿಸಿ, ಒಟಿಪಿ ಪಡೆದು ವಂಚಿಸುತ್ತಿರುವ ಪ್ರಕರಣಗಳು ಆಗಾಗ ವರದಿಯಾಗುತ್ತಿವೆ. ಇಂತಹ ಮೆಸೇಜುಗಳು ನಿಮಗೂ ಬರಬಹುದು. ಆ ಸಂದರ್ಭ ನಿಮ್ಮ ಖಾತೆ ಇರುವ ಬ್ಯಾಂಕ್‌ ಶಾಖೆಗೆ ತೆರಳಿ ಮ್ಯಾನೇಜರ್‌ ಅಥವಾ ಇತರೆ ಸಿಬ್ಬಂದಿಯನ್ನು ವಿಚಾರಿಸಿದರೆ ಅಸಲಿ ಸಂಗತಿ ಗೊತ್ತಾಗಲಿದೆ. ಪ್ರತಿ ಬ್ಯಾಂಕ್‌ ತನ್ನದೆ ಪ್ರತ್ಯೇಕ ಕಸ್ಟಮರ್‌ ಕೇರ್‌ ನಂಬರ್‌ ಹೊಂದಿರುತ್ತದೆ. ತುರ್ತು ಸಂದರ್ಭ ಬ್ಯಾಂಕಿನ ಅಧಿಕೃತ ಕಸ್ಟಮರ್‌ ಕೇರ್‌ ನಂಬರ್‌ಗೆ ಕರೆ ಮಾಡುವದರಿಂದ ವಂಚಕರ ಜಾಲಕ್ಕೆ ಬೀಳುವುದು ತಪ್ಪಲಿದೆ.

ಇದನ್ನೂ ಓದಿ – ನೀವು ಇನ್ನೂ ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿಲ್ಲವಾ? ಈಗಲೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NITIN KAIDOTLU QUOTE jpg

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-City-MRS-Drone-Shot ಶಿವಮೊಗ್ಗದ MRS ಸರ್ಕಲ್‌ನಲ್ಲಿ ಕ್ಯಾಂಟೀನ್‌ಗೆ ಹೋಗಿ ಹೊರಬಂದಾಗ ಭದ್ರಾವತಿ ಯುವಕನಿಗೆ ಕಾದಿತ್ತು ಶಾಕ್
Next Article ZP-Member-Manishekar-Shadakshari-urge-minister-post-for-Sangameshwara ʼಮಂತ್ರಿ ಆಗ್ತಾರೆ ಅಂತಾ ಜನ ಮತ ನೀಡಿದ್ದಾರೆ, ಕೈ ತಪ್ಪಿದರೆ ಹೋರಾಟಕ್ಕೆ ಸಿದ್ಧವಾಗಲಿದೆ ರೂಪುರೇಷೆʼ

ಇದನ್ನೂ ಓದಿ

Minister-Madhu-Bangarappa-at-Kandayotsava
SORABA

ಸೊರಬದಲ್ಲಿ ಹಕ್ಕುಪತ್ರ, ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಣೆ, ಕ್ಯಾಲೆಂಡರ್‌ ಬಿಡುಗಡೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Plate bank at Soraba
SORABA

ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Electric-Locomotive-train-for-Shimoga
CRIME DIARYSHIVAMOGGA CITY

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Madhu-Bangarappa-Minister
SHIVAMOGGA CITYSORABA

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಿನಿಸ್ಟರ್‌ ಮಧು ಬಂಗಾರಪ್ಪ ಭೇಟಿ, ಹಲವು ಕಾರ್ಯಕ್ರಮದಲ್ಲಿ ಭಾಗಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?