ಶಿವಮೊಗ್ಗ: ಚಿನ್ನಾಭರಣ ಅಂಗಡಿಯಲ್ಲಿ ಚಿನ್ನದ ಉಂಗುರ ಖರೀದಿಸಿದ ವ್ಯಕ್ತಿಯೊಬ್ಬ ಆನ್ಲೈನ್ (phonepe) ಮೂಲಕ ಹಣ ಪಾವತಿಸಿದಂತೆ ನಟಿಸಿ ನಂತರ ವ್ಯಾಪಾರಿಯ ಬ್ಯಾಂಕ್ ಖಾತೆಯನ್ನೇ ಫ್ರೀಜ್ ಮಾಡಿಸಿದ್ದಾನೆ. ಆತಂಕಕ್ಕೀಡಾದ ವ್ಯಾಪಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಗರದ ಗಾಂಧಿಬಜಾರ್ನ (Gandhi Bazaar) ಷಾ ಘವರ್ ಚಂದ್ ಪೆರಾಜಿ ಜ್ಯೂವೆಲರಿ ಅಂಗಡಿಗೆ (jeweler) ಬಂದಿದ್ದ ನಿಂಗಪ್ಪ ಎಂ. ಮುದೂರ ಎಂಬಾತ, ಮಾಲೀಕ ಭವಿಕ್ ಎಂ. ಜೈನ್ ಅವರಿಂದ ₹75,500 ಮೌಲ್ಯದ 4 ಗ್ರಾಂ 990 ಮಿಲಿ ತೂಕದ ಬಂಗಾರದ ಉಂಗುರ (Gold Ring) ಖರೀದಿಸಿದ್ದ. ಬಳಿಕ ₹500 ಮುಂಗಡ ಹಣ ನೀಡಿ, ಉಳಿದ ₹75,000 ಹಣವನ್ನು ಮಾಲೀಕರ ಬ್ಯಾಂಕ್ ಖಾತೆಗೆ ಫೋನ್ ಪೇ ಮೂಲಕ ವರ್ಗಾಯಿಸಿ ಉಂಗುರ ಖರೀದಿಸಿ ತೆರಳಿದ್ದ.
ಬ್ಯಾಂಕ್ ಖಾತೆಯೇ ಫ್ರೀಜ್
ಮರುದಿನ ಮಾಲೀಕ ಹಣ ಡ್ರಾ ಮಾಡಲು ಬ್ಯಾಂಕಿಗೆ (Bank) ಹೋದಾಗ ಅವರ ಖಾತೆ ಫ್ರೀಜ್ (Account Freeze) ಆಗಿರುವುದು ತಿಳಿದು ಬಂದಿದೆ. ನಿಂಗಪ್ಪ ಚಿನ್ನದ ಅಂಗಡಿ ಮಾಲೀಕನ ಖಾತೆಗೆ ಹಣ ವರ್ಗಾಯಿಸಿ ಬಳಿಕ ತಪ್ಪಾಗಿ ವರ್ಗಾಯಿಸಿರುವುದಾಗಿ ಸೈಬರ್ ಕ್ರೈಂಗೆ ಸುಳ್ಳು ದೂರು ನೀಡಿದ್ದ. ಇದರಿಂದ ಚಿನ್ನದ ಅಂಗಡಿ ಮಾಲೀಕ ಬ್ಯಾಂಕ್ ಖಾತೆ ಲಾಕ್ ಆಗಿತ್ತು. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ