ಚಿನ್ನ, ಷೇರಿನ ಮೇಲೆ ಹೂಡಿಕೆ ಮಾಡುವವರೆ ಎಚ್ಚರ, ಶಿವಮೊಗ್ಗದಲ್ಲಿ ದಾಖಲಾಯ್ತು ಪ್ರಕರಣ, ಆಗಿದ್ದೇನು?

Published On : ಜನವರಿ 27, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಷೇರು ಮಾರುಕಟ್ಟೆ ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ ಸೈಬರ್ ವಂಚಕರು (cyber fraudsters), ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹61 ಲಕ್ಷ ವಂಚಿಸಿದ್ದಾರೆ. ಖಾಸಗಿ ಕಂಪನಿಯ ಹೆಸರಿನಲ್ಲಿ ನಕಲಿ ಜಾಲ ಸೃಷ್ಟಿಸಿ ಬೃಹತ್ ಮೊತ್ತದ ಹಣ ಲೂಟಿ ಮಾಡಲಾಗಿದೆ.

ಇದನ್ನೂ ಓದಿ – ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

ಅಪರಿಚಿತ ವ್ಯಕ್ತಿಗಳು ಒಂದು ಕಂಪನಿಯ ಪ್ರತಿನಿಧಿಗಳಂತೆ ನಟಿಸಿ ಶಿವಮೊಗ್ಗದ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ತಮ್ಮ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ, ಚಿನ್ನ ಮತ್ತು ಷೇರು ಮಾರುಕಟ್ಟೆಯಲ್ಲಿ ವಿನಿಯೋಗಿಸಿ ಹೆಚ್ಚಿನ ಲಾಭ ತಂದುಕೊಡುವುದಾಗಿ ಆಮಿಷ ಒಡ್ಡಿದ್ದಾರೆ. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ 2025ರ ಜುಲೈ 16 ರಿಂದ ಡಿಸೆಂಬರ್ 12ರವರೆಗೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಒಟ್ಟು ₹61,00,000 ವರ್ಗಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಂಚಕರು ಹಣ ಪಡೆದ ತಕ್ಷಣ ನೀಡಿದ್ದ ಯುಪಿಐ ಐಡಿಗಳನ್ನು ಡಿಲೀಟ್ ಮಾಡಿ ಸಾಕ್ಷ್ಯ ನಾಶಪಡಿಸಿದ್ದಾರೆ. ದೂರುದಾರರಿಗೆ ಯಾವುದೇ ಲಾಭಾಂಶ ನೀಡದೆ, ಅಸಲು ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 27, 2026

Leave a Comment