ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ‘ಆಕಸ್ಮಿಕ ಬೆಂಕಿʼಗೆ ಲಾಡ್ಜ್ ಕೊಠಡಿಯಲ್ಲಿದ್ದ ಮಹಿಳೆಯೊಬ್ಬರು ಭಾಗಶಃ ಸುಟ್ಟು ಹೋಗಿದ್ದಾರೆ. ಶಿವಮೊಗ್ಗದಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ದಾವಣಗೆರೆ ಮೂಲದ ಗೀತಾ ಎಂಬಾಕೆ ಬೆಂಕಿಗೆ ಸುಟ್ಟು ಹೋಗಿದ್ದಾರೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದೇಹದ ಬಹುಭಾಗ ಸುಟ್ಟಿದ್ದರಿಂದ ಕೂಡಲೆ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಾಡ್ಜ್ ರೂಂನಲ್ಲಿ ‘ಅಕಸ್ಮಿಕ ಬೆಂಕಿ’
ನಗರದ ಬಿ.ಹೆಚ್.ರಸ್ತೆಯಲ್ಲಿರುವ ಹೊಟೇಲ್ನಲ್ಲಿ ಕಳೆದ ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ರಾತ್ರಿ 12.45ರ ಹೊತ್ತಿಗೆ ಘಟನೆ ಸಂಭವಿಸಿದೆ. ‘ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಗಾಯಗೊಂಡಿದ್ದಾರೆʼ ಎಂದು ಮೆಗ್ಗಾನ್ ಆಸ್ಪತ್ರೆಯ ಎಂಎಲ್ಸಿ ವರದಿಯಲ್ಲಿ ನಮೂದಿಸಲಾಗಿದೆ.
ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿಯಬೇಕಿದೆ.
ಇದನ್ನೂ ಓದಿ » ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ
LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು
















