ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್’ನಲ್ಲಿ ಮೆಸೇಜ್ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ನಾಪತ್ತೆಯಾಗಿದ್ದಾರೆ. ಇದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರಲ್ಲಿ ಆತಂಕ ಸೃಷ್ಟಿಸಿದೆ.

ಜಿಲ್ಲಾಧಿಕಾರಿ ಕಚೇರಿಯ ಸೆಕ್ಷನ್ ಒಂದರ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ (39) ಅವರು ನಾಪತ್ತೆಯಾಗಿದ್ದಾರೆ. ಬೆಳಗ್ಗೆಯಿಂದ ಅವರ ಹುಡುಕಾಟ ನಡೆಯುತಿದೆ.

ಬೆಳಗ್ಗೆ ಮನೆಯಿಂದ ಹೊರಟಿದ್ದಾರೆ

ಗಿರಿರಾಜ್ ಅವರು ಬೆಳಗಿನ ಜಾವ ಮನೆಯಿಂದ ಹೊರಟಿದ್ದಾರೆ. ತಮ್ಮ ವಾಹನವನ್ನು ಕೂಡ ಕೊಂಡೊಯ್ದಿಲ್ಲ ಎಂದು ತಿಳಿದು ಬಂದಿದೆ. ಬಹು ಹೊತ್ತಾದರೂ ಗಿರಿರಾಜ್ ಮನೆಗೆ ಹಿಂತಿರುಗದ ಹಿನ್ನೆಲೆ ಮನೆಯವರು ಆತಂಕಕ್ಕೀಡಾಗಿದ್ದಾರೆ. ನೆರೆಹೊರೆಯವರು,ಸ್ನೇಹಿತರನ್ನು ವಿಚಾರಿಸಿದ್ದಾರೆ.

ADVT JULY NANJAPPA HOSPITAL HOME LAB TESTING

ವಾಟ್ಸಪ್’ನಲ್ಲಿ ಆತ್ಮಹತ್ಯೆಯ ಮೆಸೇಜ್

ಗಿರಿರಾಜ್ ಅವರು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪ್’ಗೆ ಮೆಸೇಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯದ ಒತ್ತಡದ ಹಿನ್ನಲೆಯಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕ

ಗಿರಿರಾಜ್ ಅವರು ವಾಟ್ಸಪ್ ಸಂದೇಶ ಮತ್ತು ಅವರ ಕುಟುಂಬದವರು ಎಲ್ಲೆಡೆ ಕರೆ ಮಾಡಿ ವಿಚಾರಿಸುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತಂಕ ಸೃಷ್ಟಿಯಾಗಿದೆ. ಗಿರಿರಾಜ್’ಗಾಗಿ ಇತರೆ ಸಿಬ್ಬಂದಿ ಹುಡಕಾಟ ಆರಂಭಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

1632381453891714 0

0001

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment