ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್‌) ಡಿವೈಎಸ್‌ಪಿ ಕೃಷ್ಣಮೂರ್ತಿ ಮತ್ತು ಎ.ಆರ್‌.ಎಸ್‌.ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಘಟನೆ ಕುರಿತು ಲೋಕಾಯುಕ್ತ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ.

ಲೋಕಾಯುಕ್ತ ಪ್ರಕಟಣೆಯಲ್ಲಿ ಏನಿದೆ?

ಡಿ.ಎ.ಆರ್.‌ ಪೊಲೀಸ್‌ನ ಎಹೆಚ್‌ಸಿ ಪ್ರಸನ್ನ ಕುಮಾರ್‌ ಅವರನ್ನು ಭದ್ರಾವತಿಯ ತಾಲೂಕು ಕಚೇರಿಯ ಖಜಾನೆಯ ಗಾರ್ಡ್‌ ಕರ್ತವ್ಯದಲ್ಲೇ ಮುಂದುವರೆಸಲು ಡಿವೈಎಸ್‌ಪಿ ಕೃಷ್ಣಮೂರ್ತಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಎಆರ್‌ಎಸ್‌ಐ ರವಿಗೆ ಅವರಿಗೆ ತಲುಪಿಸುವಂತೆ ಸೂಚಿಸಿದ್ದರು. ಈ ಕುರಿತು ಫೋನ್‌ನಲ್ಲಿ ನಡೆಸಿದ ಸಂಭಾಷಣೆಯನ್ನು ಪ್ರಸನ್ನ ಕುಮಾರ್‌ ರೆಕಾರ್ಡ್‌ ಮಾಡಿಕೊಂಡಿದ್ದರು ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Lokayukta-raid-on-DYSP-Krishnamurthy-in-Shimoga.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?

ಲೋಕಾಯುಕ್ತಕ್ಕೆ ದೂರು ನೀಡಿದ್ದ ಪೊಲೀಸ್‌

ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪ್ರಸನ್ನ ಕುಮಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಮಧ್ಯಾಹ್ನ ಡಿ.ಎ.ಆರ್‌ ಪೊಲೀಸ್‌ ವಸತಿ ಗೃಹದಲ್ಲಿರುವ ಡಿವೈಎಸ್‌ಪಿ ಮನೆಯಲ್ಲಿ ಪ್ರಸನ್ನ ಕುಮಾರ್‌ ಹಣವನ್ನು ಡಿವೈಎಸ್‌ಪಿ ಕೃಷ್ಣಮೂರ್ತಿಗೆ ಅವರಿಗೆ ಕೊಟ್ಟಿದ್ದಾರೆ. ಆಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Web-Design

5 ಸಾವಿರ ರೂ. ಹಣದ ಸಹಿತ ಡಿವೈಎಸ್‌ಪಿ ಕೃಷ್ಣಮೂರ್ತಿ, ಎಆರ್‌ಎಸ್‌ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಠಾಣೆ ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್‌.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ.

ಲೋಕಾಯುಕ್ತ (Lokayukta) ಎಸ್‌.ಪಿ ಮಂಜುನಾಥ ಚೌದರಿ, ಡಿವೈಎಸ್‌ಪಿ ಚಂದ್ರಶೇಖರ್‌.ಬಿ.ಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್‌.ಕುಸಲಾಪುರ, ಸಿಬ್ಬಂದಿ ಯೋಗೇಶ್‌, ಮಂಜುನಾಥ್‌, ಟೀಕಪ್ಪ, ಸುರೇಂದ್ರ, ಪ್ರಶಾಂತ್‌ ಕುಮಾರ್‌, ಚನ್ನೇಶ, ದೇವರಾಜ್‌, ಅರುಣ್‌ ಕುಮಾರ್‌, ಪ್ರಕಾಶ್‌ ಬಾರಿಮರದ, ಅಂಜಲಿ, ಚಂದ್ರಿಬಾಯಿ, ಗೋಪಿ, ಜಯಂತ್‌, ತರುಣ್‌ ಕುಮಾರ್‌, ಗಂಗಾಧರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2025

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment