SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಹುಣಸೋಡು ಗ್ರಾಮದ ರೇಣುಕಾಪ್ರಸಾದ್ ಎಂಬುವವರು ಗೋಪಿ ಸರ್ಕಲ್ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?

