ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗ: ಸಾಕು ನಾಯಿಯ (pet dog) ವಿಚಾರವಾಗಿ ಆರಂಭವಾದ ಸಣ್ಣ ಜಗಳ, ವ್ಯಕ್ತಿಯೊಬ್ಬರ ಹಲ್ಲು ಮುರಿಯುವಷ್ಟು ದೊಡ್ಡ ಮಟ್ಟದ ಹಲ್ಲೆಯಲ್ಲಿ ಅಂತ್ಯವಾಗಿದೆ. ನಗರದ ಮಂಡ್ಲಿಯಲ್ಲಿ ಘಟನೆ ನಡೆದಿದೆ.

ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರು ಹಲ್ಲೆಗೊಳಗಾಗಿದ್ದಾರೆ. ಮಾರ್ಚ್ 13ರ ರಾತ್ರಿ ಖಾಸಗಿ ಸಂಸ್ಥೆಯ ಉದ್ಯೋಗಿ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಈ ವೇಳೆ ಅವರ ಸಾಕು ನಾಯಿ ಹತ್ತಿರ ಬಂದಿದ್ದು, ಅದರ ಹಿಂಗಾಲಿನಲ್ಲಿ ರಕ್ತ ಬರುತ್ತಿರುವುದನ್ನು ಗಮನಿಸಿದ್ದರು. ನಾಯಿ ಕಾಲಿಗೆ ಯಾರೋ ಏನೋ ಮಾಡಿದ್ದಾರೆ ಎಂದು ಅವರು ಮಾತನಾಡಿಕೊಳ್ಳುತ್ತಿದ್ದಾಗ, ಪಕ್ಕದ ಮನೆಯವರು ಜಗಳಕ್ಕೆ ಇಳಿದಿದ್ದಾರೆ ಎಂದು ಆರೋಪಿಸಲಾಗಿದೆ.

Doddapete-Police-Station-Shimoga

ಹಲ್ಲು ಮುರಿದು ಜೀವ ಬೆದರಿಕೆ

ನಾಯಿ ವಿಚಾರವಾಗಿ ಮಾತನಾಡಿದ್ದನ್ನು ಪ್ರಶ್ನಿಸಿ ನೆರೆಮನೆಯವರು ಏಕಾಏಕಿ ಖಾಸಗಿ ಸಂಸ್ಥೆ ಉದ್ಯೋಗಿ ಮೇಲೆ ಎರಗಿದ್ದಾರೆ. ಕೈಯಲ್ಲಿದ್ದ ಕಡಗದಿಂದ ಎಡಗಣ್ಣಿಗೆ ಗುದ್ದಿ, ಮುಷ್ಟಿಯಿಂದ ಬಾಯಿಗೆ ಬಲವಾಗಿ ಹೊಡೆದಿದ್ದಾರೆ. ಘಟನೆಯಲ್ಲಿ ಖಾಸಗಿ ಸಂಸ್ಥೆ ಉದ್ಯೋಗಿಯ ಹಲ್ಲು ಮುರಿದಿದ್ದು, ಮುಖಕ್ಕೆ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ವೇಳೆ ಖಾಸಗಿ ಸಂಸ್ಥೆ ಉದ್ಯೋಗಿಯ ಕುಟುಂಬದವರ ಮೇಲೂ ಹಲ್ಲೆಯಾಗಿದೆ ಎಂದು ಆಪಾದಿಸಲಾಗಿದೆ. ಗಾಯಾಳು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 17, 2026 at 12:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 17, 2026

Leave a Comment