ಶಿವಮೊಗ್ಗ LIVE
ಶಿವಮೊಗ್ಗ: ಖ್ಯಾತ ಸ್ತ್ರೀ ರೋಗ (Doctor) ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಮೃತಪಟ್ಟಿದ್ದಾರೆ. ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್ ನೇಣಿಗೆ ಶರಣಾಗಿದ್ದಾರೆ.


ಇದನ್ನೂ ಓದಿ » ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




