SHIVAMOGGA LIVE NEWS | 29 ಮಾರ್ಚ್ 2022
ವೈದ್ಯೆಯೊಬ್ಬರು ಸಾಗರದ ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಡಾ.ಶರ್ಮದಾ (36) ಅವರು ಕೆರೆಗೆ ಹಾರಿದವರು. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಗಣಪತಿ ಕೆರೆ ಬಳಿ ಬಂದ ಡಾ.ಶರ್ಮದಾ, ಸ್ಕೂಟಿ ನಿಲ್ಲಿಸಿ, ಚಪ್ಪಲಿಯನ್ನು ಕೆರೆ ದಂಡೆ ಬಿಟ್ಟು ಹಾರಿದ್ದಾರೆ ಎಂದು ತಿಳಿದು ಬಂದಿದೆ.
ಡಾ.ಶರ್ಮದಾ ಅವರು ಕೆರೆಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಅವರು ಉಸಿರಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೈದ್ಯೆಯನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?
ಡಾ.ಶರ್ಮದಾ ಅವರು ತಾಲೂಕು ವೈದ್ಯಾಧಿಕಾರಿ ಕಚೇರಿಯ ಬಾಲ ಸ್ವಾಸ್ಥ್ಯ ಯೋಜನೆ ಅಡಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಸುನೀಲ್ ಅವರು ಭೀಮನಕೋಣೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಡಾ.ಶರ್ಮದಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೋವಿಡ್ ಸಂದರ್ಭ ಪ್ರಶಂಸೆ
ಡಾ.ಶರ್ಮದಾ ಅವರು ಆಯುರ್ವೇದ ತಜ್ಞರಾಗಿದ್ದರು. ಕೋವಿಡ್ ಸಂದರ್ಭ ಇವರ ಸೇವೆ ಪ್ರಶಂಸೆಗೆ ಪಾತ್ರವಾಗಿತ್ತು. ಲಸಿಕೆ ನೀಡುವ ವೇಳೆಯು ಇವರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇನ್ನು, ಡಾ.ಶರ್ಮದಾ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇವರ ಸಾವಿನ ಕುರಿತು ಸಮಗ್ರ ತನಿಕೆ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200