ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್ಬುಕ್ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಸಕ್ಕೆ, ಕಾರಣವೇನು?
ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದ ವೈದ್ಯರಿಗೆ 65 ಸಾವಿರ ರೂ. ಲಾಭಾಂಶ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಂತರ 1.5 ಕೋಟಿ ರೂ. ಹೂಡಿಕೆ ಮಾಡಿದರೆ 25 ಕೋಟಿ ರೂ. ಲಾಭ ಗಳಿಸಬಹುದು ಎಂದು ನಂಬಿಸಿದ್ದರು. ಇಷ್ಟು ಹಣವಿರದ ಹಿನ್ನೆಲೆ ವೈದ್ಯರು ತಮ್ಮ ಇಬ್ಬರು ಸ್ನೇಹಿತರಿಂದ ಹಣ ಹೂಡಿಕೆ ಮಾಡಿಸಿದ್ದರು. ಲಾಭದಲ್ಲಿ ಮೂವರು ಹಂಚಿಕೊಳ್ಳುವ ಕುರಿತು ಮಾತನಾಡಿಕೊಂಡಿದ್ದರು. 1.50 ಕೋಟಿ ರೂ. ಹೂಡಿಕೆ ಮತ್ತು ತೆರಿಗೆ ಹಣವನ್ನು ಪಾವತಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹೂಡಿಕೆ ಮತ್ತು ಲಾಭಾಂಶದ ಕುರಿತು ವಿಚಾರಿಸಲು ಕರೆ ಮಾಡಿದಾಗ ವಂಚನೆಗೊಳಗಾಗಿದ್ದು ಅರಿವಿಗೆ ಬಂದಿದೆ. ಈ ಹಿನ್ನೆಲೆ 2.19 ಕೋಟಿ ರೂ. ವಂಚನೆಯಾಗಿದೆ ಎಂದು ಆರೋಪಿಸಿ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200