ಹೆಂಡತಿಗೆ ಕಿರುಕುಳ, ಗಂಡನಿಗೆ ಜೈಲು ಶಿಕ್ಷೆ, ದಂಡ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ವರದಕ್ಷಿಣೆ ಹಾಗೂ ಸೈಟ್‌ಗಾಗಿ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಇಲ್ಲಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ವರ್ಷ ಸಾದಾ ಸಜೆ ಹಾಗೂ ಒಟ್ಟು ₹15,000 ದಂಡ ವಿಧಿಸಿ ತೀರ್ಪು ನೀಡಿದೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರು ನಿವಾಸಿ ಮಂಜುನಾಥ್ ಶಿಕ್ಷೆಗೆ ಒಳಗಾದ ಅಪರಾಧಿ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ವರದಕ್ಷಿಣೆ, ಸೈಟು, ಬಂಗಾರ

ಮಂಜುನಾಥ್ ತನ್ನ ಪತ್ನಿ ಸುಮಾ ಅವರಿಗೆ ಹೆಚ್ಚಿನ ವರದಕ್ಷಿಣೆ, ಸೈಟ್ ಹಾಗೂ ಬಂಗಾರ ತರುವಂತೆ ಪೀಡಿಸಿ ಕಿರುಕುಳ ನೀಡಿದ್ದಲ್ಲದೆ, ಜೀವ ಬೆದರಿಕೆಯೊಡ್ಡಿದ್ದ. ಈ ಸಂಬಂಧ 2017ರಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಪ್ರಭಾವತಿ.ಸಿ ಅವರು ತನಿಖೆ ನಡೆಸಿ 2018ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Shivamogga-Court-Building

ಸಾಕ್ಷ್ಯ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಅವರು, ಆರೋಪಿ ಮಂಜುನಾಥನಿಗೆ ಐಪಿಸಿ ಕಲಂ 498(ಎ) ಅಡಿ ಮೂರು ವರ್ಷ ಸಾದಾ ಸಜೆ, ₹10,000 ದಂಡ ಹಾಗೂ ಕಲಂ 506ರ ಅಡಿ 2 ವರ್ಷ ಸಾದಾ ಸಜೆ ಮತ್ತು ₹5,000 ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.