ಹಂದಿ ಅಣ್ಣಿ ಕೊಲೆ ಕೇಸ್‌, ಶಿವಮೊಗ್ಗ ಕೋರ್ಟ್‌ ಸುತ್ತ ಬಂದೋಬಸ್ತ್‌, ಡ್ರೋಣ್‌ ಕಣ್ಗಾವಲು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡ್ರೋಣ್‌ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು.

ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್‌, ಮದನ್‌ ರಾಯ್‌, ಫಾರೂಖ್‌, ಚಂದನ್‌ ಇವತ್ತು ವಿಚಾರಣೆಗೆ ಹಾಜರಾಗಿದ್ದರು.

ಕೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ

ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಜಯನಗರ, ವಿನೋಬಗರ ಠಾಣೆ ಪೊಲೀಸರು ಬಂದೋಬಸ್ತ್‌ ಕೈಗೊಂಡಿದ್ದರು. ಇನ್ನು, ಕೋರ್ಟ್‌ ಆವರಣದಲ್ಲಿ ಎರಡು ಡ್ರೋಣ್‌ ಕ್ಯಾಮರಾಗಳನ್ನು ಹಾರಿಸಿ, ಜನ ಸಂಚಾರದ ಮೇಲೆ ನಿಗಾ ವಹಿಸಿದ್ದರು.

Handi-Anni-Case-high-alert-in-Shimoga-court

ಬಿಗಿ ಭದ್ರತೆಗೆ ಕಾರಣವೇನು?

» ಕಾರಣ 1

ಹಂದಿ ಅಣ್ಣಿ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಪ್ರಮುಖ ಆರೋಪಿಗಳಾದ ಆಂಜನೇಯ ಮತ್ತು ಮಧು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ಮುಗಿಸಿ 2023ರ ಮಾರ್ಚ್‌ 15ರಂದು ತಮ್ಮ ಊರು ಭಾನುವಳ್ಳಿಗೆ ಬೈಕಿನಲ್ಲಿ ತೆರಳುತ್ತಿದ್ದರು. ನ್ಯಾಮತಿ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿ ಬಂದ ಗುಂಪೊಂದು ಬೈಕ್‌ಗೆ ಡಿಕ್ಕಿ ಹೊಡೆಸಿತ್ತು. ಘಟನೆಯಲ್ಲಿ ಆಂಜನೇಯ (30) ಸ್ಥಳದಲ್ಲೆ ಸಾವನ್ನಪ್ಪಿದ್ದ. ಮಧು (28) ಗಂಭೀರ ಗಾಯಗೊಂಡಿದ್ದ.

» ಕಾರಣ 2

ಹಂದಿ ಅಣ್ಣಿ ಹತ್ಯೆ ಆರೋಪಿಗಳ ಪೈಕಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಐವರು ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯದ ಆವರಣದಲ್ಲಿಯೆ ಅವರ ಮೇಲೆ ದಾಳಿಯಾಗುವ ಸಾಧ್ಯತೆ ಹಿನ್ನೆಲೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

» ಕಾರಣ 3

ಹತ್ಯೆ ಪ್ರಕರಣದ ಸಾಕ್ಷಿಗಳು ಇವತ್ತು ನ್ಯಾಯಾಲಯಕ್ಕೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ. ಸಾಕ್ಷಿಗಳ ಮೇಲೆ ಪ್ರಭಾವ ಅಥವಾ ಬೆದರಿಕೆ ಒಡ್ಡುವ ಸಾಧ್ಯತೆ ಇತ್ತು. ಹಾಗಾಗಿ ಬಂದೋಬಸ್ತ್‌ ಹೆಚ್ಚಳ ಮಾಡಲಾಗಿತ್ತು.

Parishrama

ನಡು ಬೀದಿಯಲ್ಲೇ ಅಟ್ಟಾಡಿಸಿ ಕೊಂದಿದ್ದರು

2022ರ ಜುಲೈ 14ರಂದು ವಿನೋಬನಗರದ ಪೊಲೀಸ್‌ ಚೌಕಿ ಸರ್ಕಲ್‌ನಲ್ಲಿ ಹಂದಿ ಅಣ್ಣಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

NATIONAL-PUBLIC-SCHOOL-scaled

ಇದನ್ನೂ ಓದಿ » ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್‌ ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment