ಶಿವಮೊಗ್ಗ: ನಗರದ ರಾಗಿಗುಡ್ಡ ಚಾನಲ್ ಏರಿ ರಸ್ತೆಯ ಖಾಲಿ ಲೇಔಟ್ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ:➤ ತ್ಯಾಗರ್ತಿ ಬಂದ್ಗೆ ದಿನಾಂಕ ಪ್ರಕಟ, ಕಾರಣವೇನು?
ರಾಗಿಗುಡ್ಡ ನಿವಾಸಿ ಅಜರುದ್ದೀನ್ ಯಾನೆ ಅಜರ್ (26) ಬಂಧಿತ ಆರೋಪಿ. ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ ನೇತೃತ್ವದ ತಂಡ ದಾಳಿ ನಡೆಸಿದೆ.

ಬಂಧಿತನಿಂದ ₹1.50 ಲಕ್ಷ ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್ ಹಾಗೂ ಮಾದಕ ವಸ್ತು ಮಾರಾಟದಿಂದ ಬಂದಿದ್ದ ₹1,600 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.