SHIVAMOGGA LIVE NEWS | 20 SEPTEMBER 2023
SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್ ಕಡೂರ್ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು.
ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ ಸ್ಥಳ, ಆರೋಪಿಗಳು ಉಳಿದುಕೊಂಡಿದ್ದ ಬಿ.ಹೆಚ್. ರಸ್ತೆ ಪಕ್ಕದ ಹೋಟೆಲ್ ಹಾಗೂ ಪ್ರಮುಖ ಕಲ್ಯಾಣಮಂದಿರದ ಬಳಿ ಮಹಜರ್ ನಡೆಸಲಾಯಿತು. ಸಿಸಿಬಿ ಇನ್ಸ್ಪೆಕ್ಟರ್ ಭರತ್ ನೇತೃತ್ವದ ಪೊಲೀಸರ ತಂಡ ಮಹಜರ್ ನಡೆಸಿದರು. ಸ್ಥಳದಲ್ಲಿ ಆರೋಪಿ ಗಗನ್ ಕಡೂರುನನ್ನು ನಿಲ್ಲಿಸಿ ಫೋಟೊ ತೆಗೆದುಕೊಂಡು ತೆರಳಿದರು.
ಇದನ್ನೂ ಓದಿ – ತೀರ್ಥಹಳ್ಳಿ ಮೂಲದ ಶಂಕಿತ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200