SHIVAMOGGA LIVE NEWS | 14 NOVEMBER 2023
SHIMOGA : ಮನೆಯೊಂದರ ಪೇಂಟಿಂಗ್ ಕೆಲಸದ ವೇಳೆ ಕಾರ್ಮಿಕನಿಗೆ ವಿದ್ಯುತ್ ಶಾಕ್ (Shock) ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು ಕಾಲಿನ ಎರಡು ಬೆರಳು ಕತ್ತರಿಸಲಾಗಿದೆ. ಎರಡು ಕೈಗಳನ್ನು ಕೂಡ ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.
ಏನಿದು ಪ್ರಕರಣ?
ಅಶೋಕ ನಗರದ ಚೇತನ್ ಕುಮಾರ್ (30) ಎಂಬಾತನನ್ನು ಪೇಂಟಿಂಗ್ ಕೆಲಸಕ್ಕೆಂದು ಮೇಸ್ತ್ರಿಯೊಬ್ಬರು ಗುಡ್ಡದ ಅರಕೆರೆಗೆ ಕರೆದೊಯ್ದಿದ್ದರು. ಅಲ್ಯುಮೀನಿಯಂ ಸ್ಟಿಕ್ ಹಿಡಿದು ಪೇಂಟಿಂಗ್ ಮಾಡುವಾಗ ಮನೆ ಮುಂಭಾಗ ಹಾದು ಹೋಗಿರುವ ವಿದ್ಯುತ್ ತಂತಿಗೆ ತಗುಲಿದೆ. ವಿದ್ಯುತ್ ಶಾಕ್ ಹೊಡೆದು ಚೇತನ್ ಕುಮಾರ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.
ಇದನ್ನೂ ಓದಿ- ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್, ಕಾರಣವೇನು?
ಬೆರಳು ಕಟ್, ಕೈ ಕತ್ತರಿಸುವ ಸೂಚನೆ
ಚೇತನ್ ಕುಮಾರ್ನನ್ನು ಕೂಡಲೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎರಡು ಕಾಲು, ಎರಡು ಕೈಗಳು ಮತ್ತು ಹೊಟ್ಟೆ ಭಾಗದಲ್ಲಿ ತೀವ್ರ ಸುಟ್ಟ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗಾಗಲೆ ಬಲಗಾಲಿನ ಎರಡು ಬೆರಳು ಕತ್ತರಿಸಿ ತೆಗೆಯಲಾಗಿದೆ. ಎರಡು ಕೈಗಳನ್ನು ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇಂಜಿನಿಯರ್, ಗುತ್ತಿಗೆದಾರ ಮತ್ತು ಮನೆ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿ ಚೇತನ್ ಕುಮಾರ್ ಕುಟುಂಬ ದೂರು ನೀಡಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200