ಶಿವಮೊಗ್ಗದ ಕಲ್ಲಗಂಗೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ

Published On : ಸೆಪ್ಟೆಂಬರ್ 1, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021

ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 ಗಾಂಜಾ ಗಿಡಗಳು ಪತ್ತೆಯಾಗಿವೆ.

ಜಮೀನು ಮಾಲೀಕನ ವಿರುದ್ಧ NDPS ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಉಪ ನಿರೀಕ್ಷಕ ಶಾಂತಕುಮಾರ್, ಸಿಬ್ಬಂದಿಗಳಾದ ರವೀಂದರ್, ನಾಗಪ್ಪ ಶಿರೋಳ್, ನಾಗಪ್ಪ, ಸುಜಾತಾ, ಮಧುಸೂದನ್, ಹೆಡ್ ಕಾನ್ಸ್ ಟೇಬಲ್ ಕೆಂಪರಾಮ, ವಾಹನ ಚಾಲಕ ನ್ಯಾನರಾಜ್ ಸೇರಿದಂತೆ ಹಲವು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

240099106 1185647928581782 8436567541758160179 n.jpg? nc cat=110&ccb=1 5& nc sid=730e14& nc ohc=RXdrm55VsewAX IQT5q& nc ht=scontent.fblr1 5

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 1, 2021

Leave a Comment