ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 9 MARCH 2021

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ ಜಿಲೆಟಿನ್ ಕಡ್ಡಿ, 3267 ಡಿಟೊನೇಟರ್‌ಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.

ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಎರಡು ವಾಹನದಲ್ಲಿ ಸ್ಪೋಟಕ ಪತ್ತೆಯಾಗಿದೆ. ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3267 ಎಲೆಕ್ಟ್ರಾನಿಕ್ ಡಿಟೊನೇಟರ್‌ಗಳು, 9 ಮೀಟರ್‌ನ 79 ಎಕ್ಸೆಲ್‍ಗಳು, 3 ಮಿಟರ್ನ‌ 105 ಎಕ್ಸೆಲ್‍ಗಳು ಪತ್ತೆಯಾಗಿವೆ.

ಬೆಂಗಳೂರಿನಿಂದ ಬಂತು ಟೀಮ್

ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ಸ್ಪೋಟಕಗಳನ್ನು ಸುರಕ್ಷಿತಗೊಳಿಸಿದ್ದು, ಆತಂಕ ದೂರವಾಗಿದೆ.

ಸ್ಪೋಟಕ ಇಲ್ಲಿ ಬಂದಿದ್ದು ಹೇಗೆ? ಯಾಕೆ?

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಮಗಾರಿ ಸ್ಥಳದಲ್ಲೆ ಕ್ವಾರಿ ಒದಗಿಸಲಾಗಿದೆ. ಇಲ್ಲಿಯೇ ಬಂಡೆ ಸ್ಪೋಟಿಸಿ, ಕಾಮಗಾರಿಗೆ ಜೆಲ್ಲಿ ಬಳಕೆ ಮಾಡಬಹುದಾಗಿದೆ. ಇದಕ್ಕೆ ಸ್ಪೋಟಕೆ ಪೂರೈಕೆ ಮಾಡುವಂತೆ ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿಯೊಂದರ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.  ಬಂಡೆ ಸ್ಪೋಟಿಸಲು ಈ ಕಂಪನಿಯವರು ಸ್ಪೋಟಕಗಳನ್ನು ತಂದಿದ್ದರು. ಬಳಿಕ ಎರಡು ವಾಹನಗಳಲ್ಲಿ ತಂದಿದ್ದ ಸ್ಪೋಟಕಗಳನ್ನು ಹಾಗೆ ಬಿಟ್ಟು ಹೋಗಿದ್ದರಿಂದ, ಆತಂಕ ಸೃಷ್ಟಿಯಾಗಿತ್ತು.

Tunga Nagara Police Station 1 1

ಬಿಟ್ಟು ಹೋಗಿದ್ದು ಏಕೆ?

ಹುಣಸೋಡು ಕ್ವಾರಿಯಲ್ಲಿ ಸ್ಪೋಟ ಪ್ರಕರಣದ ಬಳಿಕ ಸ್ಪೋಟಕ ಬಳಕೆಗೆ ಕಡಿವಾಣ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕ ಬಳಕೆ ಬಗ್ಗೆ ಜಿಲ್ಲಾಧಿಕಾರಿ ಅವರ ಅನುಮತಿ ಕೇಳಿದರು. ಮಂಗಳೂರಿನಲ್ಲಿರುವ  ಪೆಟ್ರೋಲಿಯಂ ಮತ್ತು ಎಕ್ಸ್‍ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್‍ನಿಂದ ಅನುಮತಿ ಪಡೆಯುವಂತೆ ಡಿಸಿ ಸೂಚಿಸಿದ್ದರು. ಸ್ಪೋಟಕ ಬಳಕೆಗೆ ಅನುಮತಿ ಕೇಳಿದಾಗ ಸ್ಪೋಟಕ ಪೂರೈಕೆ ಕಂಪನಿಯವರು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಇದೆ ಗೊಂದಲದಿಂದ ಸ್ಪೋಟಕವನ್ನು ಅಲ್ಲಿಯೇ ಬಿಟ್ಟು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಉಲ್ಲಂಘನೆ ಆದ ನಿಯಮವೇನು?

ಹೇಗೆಂದರೆ ಹಾಗೆ ಸ್ಪೋಟಕವನ್ನು ಸಾಗಣೆ ಮಾಡುವಂತಿಲ್ಲ. 150 ಕಿ.ಮೀ ಮಾತ್ರ ಸ್ಪೋಟಕ ಸಾಗಣೆ ಮಾಡಬಹುದು. ಆದರೆ ಸ್ಪೋಟಕ ಪೂರೈಕೆ ಕಂಪನಿಯು ಚಿಕ್ಕಬಳ್ಳಾಪುರದಿಂದ ಶಿವಮೊಗ್ಗದವರೆಗೆ ಸ್ಪೋಟಕ ಪೂರೈಕೆ ಮಾಡಿ ನಿಯಮನ್ನು ಉಲ್ಲಂಘಿಸಿತ್ತು. ಅಲ್ಲಿ ಸ್ಪೋಟಕ ಬಳಕೆಗೆ ಅವಕಾಶವಿಲ್ಲ ಎಂದು  ಮಂಗಳೂರಿನ  ಪೆಟ್ರೋಲಿಯಂ ಮತ್ತು ಎಕ್ಸ್‍ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್‍ನಿಂದ ತಿಳಿದು ಬಂದಿತ್ತು. ಹಾಗಾಗಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕಗಳನ್ನು ಅಲ್ಲಿಯೇ ಬಿಟ್ಟು ತೆರಳಿದ್ದರು.

ವಾಹನದಲ್ಲಿ ಸ್ಪೋಟಕ ಇರುವ ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ದೀಪಕ್‍ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತ್ತು.

ನಿಗದಿತ ದೂರಕ್ಕಿಂತಲೂ ಹೆಚ್ಚು ದೂರ ಸ್ಪೋಟಕ ಸಾಗಣೆ ಮತ್ತು ಆ ಬಳಿಕ ಸ್ಪೋಟಕವನ್ನು ಕೊಂಡೊಯ್ಯದೆ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ಸಂಬಂಧ, ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment