SHIVAMOGGA LIVE NEWS | 9 APRIL 2023
SHIMOGA : ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಫೋನ್ (Phone Call) ಮಾಡಿ ಉಪನ್ಯಾಸಕಿ ಒಬ್ಬರ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ.
ಶಿವಮೊಗ್ಗದ ಉಪನ್ಯಾಸಕಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತನೊಬ್ಬ ತಾನು ಕೆನರಾ ಬ್ಯಾಂಕ್ (Phone Call) ಸಿಬ್ಬಂದಿ ಎಂದು ತಿಳಿಸಿದ್ದಾನೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಅಪ್ಡೇಟ್ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ಖಾತೆ ಬ್ಲಾಕ್ ಆಗಲಿದೆ. ಎಟಿಎಂ ಕಾರ್ಡ್ ಅವಧಿ ಮುಗಿಯಲಿದೆ ಎಂದು ಎಚ್ಚರಿಸಿದ್ದಾನೆ. ಇದನ್ನು ನಂಬಿದ ಉಪನ್ಯಾಸಕಿ ಮಾಹಿತಿ ಒದಗಿಸಿದ್ದಾರೆ. ಒಟಿಪಿ ಬಂದಿದ್ದು, ಅದನ್ನು ತಿಳಿಸಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ಕೆಲವೇ ಹೊತ್ತಿನಲ್ಲಿ ಉಪನ್ಯಾಸಕಿ ಬ್ಯಾಂಕ್ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಆಗಿರುವ ಮೆಸೇಜ್ ಬಂದಿದೆ. ವಂಚನೆಗೊಳಗಾಗಿರುವ ವಿಚಾರ ತಿಳಿದು ಉಪನ್ಯಾಸಕಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200