ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು

SHIVAMOGGA LIVE NEWS, 30 JANUARY 2024

ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿಸಿ ಅಪರಿಚಿತನೊಬ್ಬ ಶಿವಮೊಗ್ಗ ನ್ಯಾಯಾಲಯದಲ್ಲಿ (COURT) ಐವರು ಆರೋಪಿಗಳಿಗೆ ಜಾಮೀನು ನೀಡಿದ್ದಾನೆ. ಆರೋಪಿಯೊಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಜಾಮೀನುದಾರನಿಗೆ ನೊಟೀಸ್‌ ಜಾರಿಯಾಗಿದೆ. ಆಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣವೊಂದರ ಆರೋಪಿಗಳಾದ ಇಬ್ರಾಹಿಂ ಖಲೀಲ್‌, ಫೈರೋಜ್‌, ಅರ್ಬಾಜ್‌, ನಯಾಜ್‌ ಅಹಮದ್‌, ಸುಹೇಲ್‌ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್‌ ಎಂಬುವವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನಾಗಿದ್ದರು.

140823-Jayanagara-Police-StationJAYANA

Kalleshwara-Enterprises.webp

ಜಾಮೀನುದಾರನಿಗೆ ನೊಟೀಸ್‌ ಜಾರಿ

ಪ್ರಕರಣದ ಐದನೇ ಆರೋಪಿ ಸುಹೇಲ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಆಗ ಜಾಮೀನುದಾರ ಜಗದೀಶ್‌ಗೆ ನೊಟೀಸ್‌ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾದ ಜಗದೀಶ್‌, ತಾನು ಯಾರಿಗೂ ಜಾಮೀನು ನೀಡಿಲ್ಲ. ಪ್ರಮಾಣಪತ್ರದಲ್ಲಿರುವ ಫೋಟೊ ತನ್ನದಲ್ಲ. ಆರೋಪಿಗಳ್ಯಾರೂ ತನಗೆ ಪರಿಚಯವಿಲ್ಲ ಎಂದು ನ್ಯಾಯಾಧೀಶರ ಮುಂದೆ ತಿಳಿಸಿದ್ದರು.

ನಕಲಿ ದಾಖಲೆ ಸೃಷ್ಟಿಸಿ ಜಾಮೀನುದಾರ ಎಂದು ಬಿಂಬಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾದ ವ್ಯಕ್ತಿ, ಆತನನ್ನು ಕರೆತಂದಿದ್ದ ನಸರುಲ್ಲಾ, ಪ್ರಕರಣದ ಐವರು ಆರೋಪಿಗಳ ವಿರುದ್ಧ ನ್ಯಾಯಾಲಯದ ಸೂಚನೆ ಮೇರೆಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ, ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಏನೆಲ್ಲ ಹೇಳಿದರು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment