ಶಿವಮೊಗ್ಗದಲ್ಲಿ ಅರ್ಧ ಕೆ.ಜಿ. ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ನಿಂದ ಲಕ್ಷ ಲಕ್ಷ ಸಾಲ ಪಡೆದ ವಂಚಕರು, ಸಿಕ್ಕಿಬಿದ್ದಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MARCH 2024

SHIMOGA : ನಕಲಿ ಚಿನ್ನಾಭರಣ ಅಡವಿಟ್ಟು ದುರ್ಗಿಗುಡಿಯಲ್ಲಿರುವ ಬ್ಯಾಂಕ್‌ ಒಂದರ ಶಾಖೆಯಿಂದ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಲಾಗಿದೆ. ಈ ಸಂಬಂಧ ಬ್ಯಾಂಕಿನ ಚಿನ್ನದ ಮೌಲ್ಯಮಾಪಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಅರ್ಧ ಕೆ.ಜಿ. ನಕಲಿ ಚಿನ್ನ

ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ನಾಲ್ಕು ಬಾರಿ ವ್ಯಕ್ತಿಯೊಬ್ಬ 476 ಗ್ರಾಂ ಚಿನ್ನ ಲೇಪಿತ ನಕಲಿ ಬಂಗಾರ ಅಡವಿಟ್ಟಿದ್ದ. 19.41 ಲಕ್ಷ ರೂ. ಸಾಲ ಪಡೆದಿದ್ದ. ಮತ್ತೊಬ್ಬ ವ್ಯಕ್ತಿ ಅಕ್ಟೋಬರ್‌ ತಿಂಗಳಲ್ಲಿ 151 ಗ್ರಾಂ ನಕಲಿ ಬಂಗಾರವನ್ನು ಅಡಿವಿಟ್ಟು 6.12 ಲಕ್ಷ ರೂ. ಸಾಲ ಪಡೆದಿದ್ದ.

ಸಿಕ್ಕಿಬಿದ್ದಿದ್ದು ಹೇಗೆ?

ಬ್ಯಾಂಕಿನ ಲೆಕ್ಕ ಪರಿಶೋಧನೆ ವೇಳೆ ನಕಲಿ ಬಂಗಾರವನ್ನು ಅಡವಿಟ್ಟಿರುವುದು ಬೆಳಕಿಗೆ ಬಂದಿದೆ. ಬ್ಯಾಂಕಿನಲ್ಲಿ ಚಿನ್ನಾಭರಣ ಪರಿಶೀಲನೆ ನಡೆಸುವ ವ್ಯಕ್ತಿ ಇತರೆ ಇಬ್ಬರೊಂದಿಗೆ ಸೇರಿಕೊಂಡು ನಕಲಿ ಬಂಗಾರವನ್ನು ಇರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಬ್ಯಾಂಕ್‌ನ ಮ್ಯಾನೇಜರ್‌ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment