ಶಿವಮೊಗ್ಗದ ಪ್ರಖ್ಯಾತ ಡಾಕ್ಟರ್ ಕೋವಿಡ್​​ಗೆ ಬಲಿ ಅಂತಾ ವಾಟ್ಸಪ್​ನಲ್ಲಿ ಸುಳ್ ಸುದ್ದಿ, ಕೇಸ್ ದಾಖಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಕರೋನದಿಂದ ಶಿವಮೊಗ್ಗದ ಪ್ರಖ್ಯಾತ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

ಶಿವಮೊಗ್ಗದ ಪ್ರಖ್ಯಾತ ನರರೋಗ ತಜ್ಞ ಡಾ.ಶಿವರಾಮ ಕೃಷ್ಣ ಅವರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿತ್ತು.

Nanjappa Hospital Advertisement

ಈ ಸುಳ್ಳು ಸುದ್ದಿಯಿಂದ ತಮಗೆ ಮಾನಸಿಕ ಆಘಾತವಾಗಿದೆ. ವೃತ್ತಿಯ ಮೇಲೂ ದುಷ್ಪರಿಣಾಮ ಉಂಟಾಗಿದೆ ಎಂದು ಆರೋಪಿಸಿ, ಡಾ. ಶಿವರಾಮ ಕೃಷ್ಣ ಅವರು ದೂರು ನೀಡಿದ್ದಾರೆ.

ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment