ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020
ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು.
ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್ನಲ್ಲಿ, ತಾಯಿ ಗ್ರಾಮಾಭಿವೃದ್ಧಿ ಸಂಘದಲ್ಲಿ ಸಾಲ ಮಾಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೆ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿನದಲ್ಲಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200