ಎತ್ತುಗಳ ಮೈತೊಳೆಯಲು ಹೋದ ರೈತ ನೀರುಪಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SORABA NEWS | 13 ಡಿಸೆಂಬರ್ 2021

ಎತ್ತುಗಳ ಮೈ ತೊಳೆಯಲು ಹೋಗಿದ್ದ ರೈತ ಕಾಲ ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಮೂಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಮೂಡಿ ಗ್ರಾಮದ ರೈತ ಶಶಿಧರ ಗೊಳೇರ್ (42) ಮೃತ ರೈತ. ಭಾನುವಾರ ಬೆಳಗ್ಗೆ ಎತ್ತುಗಳ ಮೈ ತೊಳೆಯಲು ಶಶಿಧರ ವರದಾ ನದಿ ಕಡೆಗೆ ಬಂದಿದ್ದರು. ಈ ಸಂದರ್ಭ ಕಾಲು ಜಾರಿಗೆ ನದಿಯಲ್ಲಿ ಮುಳುಗಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸೊರಬ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಕಾರ್ಯಾಚರಣೆ ನಡೆಸಿ, ಶಶಿಧರ ಅವರ ಮೃತದೇಹವನ್ನು ಪತ್ತೆ ಹಚ್ಚಿದರು.

ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ಕೆ.ಮಹಾಬಲೇಶ್ವರ, ಸಿಬ್ಬಂದಿ ಡಿ.ವಿ.ಮಂಜುನಾಥ, ವಿ.ನಾಗರಾಜ್, ಪರಶುರಾಮ, ಡಿ.ಕೆ.ನಾಗರಾಜ, ಡಿ.ಬಿ.ರಾಜೇಂದ್ರ ಪಾಲ್ಗೊಂಡಿದ್ದರು. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

shivamogga live subscribe New Kannada

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment