SHIVAMOGGA LIVE NEWS | 14 APRIL 2023
ANAVATTI : ಸಾಲ ಬಾಧೆ, ಅಡಕೆ ತೋಟ ಒಣಗುತ್ತಿದ್ದದ್ದನ್ನು ಕಂಡು ಮನನೊಂದಿದ್ದ ರೈತರೊಬ್ಬರು ಜಮೀನು ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕಾತುವಳ್ಳಿ ಗ್ರಾಮದ ರೈತ (Farmer) ಮಲ್ಲಿಕಾರ್ಜುನ ಗೌಡ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಡಕೆ ತೋಟದಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿತ್ತು. ವಿದ್ಯುತ್ ಸ್ಥಗಿತದಿಂದಾಗಿ ಕೊಳವೆ ಬಾವಿಯಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಮೇಲೆತ್ತಿ ತೋಟಕ್ಕೆ ಹಾಯಿಸಲು ಆಗುತ್ತಿರಲಿಲ್ಲ. ಇದರಿಂದ ತೋಟ ಒಣಗುತ್ತಿದೆ ಎಂದು ಮನನೊಂದಿದ್ದರು. ಸಹಕಾರ ಸಂಘ ಮತ್ತು ಕೈ ಸಾಲ ಮಾಡಿಕೊಂಡಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ –ಶಿವಮೊಗ್ಗ ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200