| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದ ಅಡಿ ಮನೆ ಕಟ್ಟಲು ಸಾಲ (Housing Loan) ಕೊಡಿಸುವುದಾಗಿ ನಂಬಿಸಿ ರೈತರೊಬ್ಬರಿಗೆ ₹3,36,000 ವಂಚಿಸಲಾಗಿದೆ.
ಮೋಸ ಆಗಿದ್ದು ಹೇಗೆ?
ಅಕ್ಟೋಬರ್ 27ರಂದು ಶಿವಮೊಗ್ಗದ ರೈತರೊಬ್ಬರ (Farmer) ಮೊಬೈಲ್ಗೆ ಅಪರಿಚಿತ ನಂಬರ್ಗಳಿಂದ ವಾಟ್ಸ್ಆ್ಯಪ್ ಮೆಸೇಜು (Whatsapp) ಮತ್ತು ಕರೆಗಳು ಬಂದಿದ್ದವು. ವಂಚಕರ ಪೈಕಿ ಒಬ್ಬರು ತಮ್ಮನ್ನು ಪ್ರಿಯಾ ಕುಮಾರಿ ಎಂದು ಪರಿಚಯಿಸಿಕೊಂಡು, ಮನೆ ಕಟ್ಟಲು ₹20 ಲಕ್ಷ ಸಾಲ (Loan) ನೀಡುವುದಾಗಿ ಹೇಳಿದ್ದರು.
ಸಾಲ ಮಂಜೂರಾಗುತ್ತದೆ ಎಂದು ನಂಬಿಸಿ, ವಂಚಕರು ಅಕೌಂಟ್ ಮಾಡಿಸಬೇಕು, ಇನ್ಶೂರೆನ್ಸ್ (Insurance) ಕಟ್ಟಬೇಕು ಮತ್ತು ಇತರೆ ಕಾರಣಗಳು ಎಂದು ಹೇಳಿ ಹಂತ ಹಂತವಾಗಿ ಹಣವನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಉಮೇಶಪ್ಪ ಅವರಿಂದ ಒಟ್ಟು ₹3,36,000 ಹಣ ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
![]()
ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
ಸಾಲದ ಹಣದ ಕುರಿತು ವಿಚಾರಿಸಲು ಕರೆ ಮಾಡಿದಾಗ, ವಂಚಕರು ಕೆವೈಸಿ (KYC) ಮಾಡಿಸಬೇಕು ಎಂದು ವಿಳಂಬ ಮಾಡಿದ್ದಾರೆ. ಇದರಿಂದ ಅನುಮಾನಗೊಂಡ ಉಮೇಶಪ್ಪ, ಪರಿಚಯಸ್ಥರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ತಿಳಿದುಬಂದಿದೆ.
ಘಟನೆ ಸಂಬಂಧ ಶಿವಮೊಗ್ಗ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
![]()