ಶಿವಮೊಗ್ಗ LIVE
ಶಿವಮೊಗ್ಗ: ಬ್ಯಾಂಕ್ ಮ್ಯಾನೇಜರ್ ಎಂದು ನಟಿಸಿದ ವಂಚಕರು ಎಟಿಎಂ ಕಾರ್ಡ್ ನವೀಕರಣದ ಹೆಸರಿನಲ್ಲಿ ರೈತರೊಬ್ಬರ (Farmer Scammed) ಖಾತೆಯಿಂದ ₹2,84,321 ಹಣವನ್ನು ಆನ್ಲೈನ್ ಮೂಲಕ ವಂಚಿಸಿದ್ದಾರೆ.
ನವೆಂಬರ್ 26ರಂದು ಅಪರಿಚಿತರು ಶಿವಮೊಗ್ಗ ಜಿಲ್ಲೆಯ ರೈತರೊಬ್ಬರ ಪತ್ನಿಯ ಮೊಬೈಲ್ಗೆ ಕರೆ ಮಾಡಿ ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಕೂಡಲೆ ನವೀಕರಿಸಬೇಕು ಎಂದು ತಿಳಿಸಿದ್ದಾರೆ. ಪತ್ನಿ ವಿಷಯ ತಿಳಿಸಿದ ನಂತರ ರೈತ, ‘ಬ್ಯಾಂಕ್ ಮ್ಯಾನೇಜರ್ʼ ಕರೆ ಮಾಡಿದ್ದ ನಂಬರ್ಗೆ ಕರೆ ಮಾಡಿದ್ದರು. ಆಗ ವಂಚಕರು ಡೆಬಿಟ್ ಕಾರ್ಡ್ ಮತ್ತು ವೈಯಕ್ತಿಕ ಬ್ಯಾಂಕ್ಗೆ ಸಂಬಂಧಿಸಿದ ಮಾಹಿತಿ ಪಡೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?
ಎಟಿಎಂ ಕಾರ್ಡ್ ನವೀಕರಣಕ್ಕೆ ನಾಮಿನಿ ಮಾಡಬೇಕೆಂದು ರೈತನನ್ನು ನಂಬಿಸಿದ್ದರು. ಅಲ್ಲದೆ ರೈತನ ಮೊಬೈಲ್ಗೆ ಬಂದ 13 ಓಟಿಪಿಗಳನ್ನು ಪಡೆದು, ಅವರ ಬ್ಯಾಂಕ್ ಖಾತೆಯಿಂದ ಒಟ್ಟು ₹2,84,321 ಹಣವನ್ನು ವರ್ಗಾಯಿಸಿಕೊಂಡಿದ್ದರು. ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿ ತನ್ನನ್ನು ವಂಚಿಸಿದ್ದಾರೆ ಎಂದು ಅರಿವಾದ ಹಿನ್ನೆಲೆ ರೈತ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು





