SHIVAMOGGA LIVE NEWS | 11 DECEMBER 2022
ಶಿವಮೊಗ್ಗ : ಕಲ್ಲಾಪುರ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು (identity) ಪತ್ತೆಯಾಗಿದ್ದು, ಎಲ್ಲರು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
(identity)
ಮೃತರ ಗುರುತು ಪತ್ತೆ
ಮೃತರನ್ನು ದಾವಣಗೆರೆ ಅವರಗೆರೆಯ ವಿವೇಕ, ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ಕಾರ್ತಿಕ್, ಮೋಹನ್ ಎಂದು ಗುರುತಿಸಲಾಗಿದೆ. ದಾವಣಗೆರೆ ಜಯನಗರದ ನಿವಾಸಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ರುದ್ರೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ.
(identity)
ಡಿಕ್ಕಿಯಾಗಿ ರಸ್ತೆ ಬದಿಗೆ ಹೋದ ಕಾರು
ವಿದ್ಯಾರ್ಥಿಗಳು ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಎದುರಿನಿಂದ ಬರುತ್ತಿದ್ದ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾದ ಬಳಿಕ ಕಾರು ರಸ್ತೆ ಬದಿಗೆ ಹೋಗಿ ತಗ್ಗಿನಲ್ಲಿ ನಿಂತಿದೆ. ಗಾಯಗೊಂಡಿದ್ದ ವಿವೇಕ, ಕಾರ್ತಿಕ್ ಮತ್ತು ಮೋಹನ್ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ
ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರುದ್ರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನಿಗೆ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ – BREAKING NEWS – ಶಿವಮೊಗ್ಗದಲ್ಲಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿ ಬಲ ಬದಿಗೆ ಹಾನಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200