ಶಿವಮೊಗ್ಗ: ಹರಿಗೆಯ ಸಕ್ಕರೆ ಕಾರ್ಖಾನೆ ಬಳಿ ಬೆಂಗಳೂರು – ಹೊನ್ನಾವರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದ ಸೀಗೆಹಟ್ಟಿ ನಿವಾಸಿಯಾದ ಗುರುರಾಜ್ (22) ಮೃತ ದುರ್ದೈವಿ. ಆಟೋ ಚಾಲಕ ಗುರುರಾಜ್ ಅವರು ಇಂದು ಬೆಳಗಿನ ಜಾವ ಶಿವಮೊಗ್ಗದಿಂದ ಭದ್ರಾವತಿಯತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಮೂರು ಭಾಗವಾಗಿ ಜಖಂಗೊಂಡಿದೆ.

ಘಟನೆಯಲ್ಲಿ ಗುರುರಾಜ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:➤ ಅಡಿಕೆ ರೇಟ್: ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ಧಾರಣೆ?