ಶಿವಮೊಗ್ಗದ ಲೈವ್.ಕಾಂ | HOSANAGARA NEWS | 10 ಫೆಬ್ರವರಿ 2022
ಸಾರ್ವಜನಿಕ ಸ್ಥಳದಲ್ಲಿ ತಂದೆಯೇ ಮಗನಿಗೆ ಚಾಕುವಿನಿಂದ ಇರಿದ್ದಿದ್ದಾರೆ. ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ತೀರ್ಥೇಶ್ (33) ಗಾಯಗೊಂಡಿರುವವರು. ತಂದೆ ರಾಜಪ್ಪಗೌಡ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಹೊಸನಗರದ ಗೊರಗೋಡು ಗ್ರಾಮದಲ್ಲಿ ತೀರ್ಥೇಶ್ ಅವರು ಕೆಲಸದ ನಿಮಿತ್ತ ಹೊಸನಗರಕ್ಕೆ ಬಂದಿದ್ದರು. ಇಲ್ಲಿನ ಹೊಟೇಲ್ ಒಂದರಲ್ಲಿ ತೀರ್ಥಶ್ ಊಟ ಮಾಡುತ್ತಿದ್ದಾಗ ತಂದೆ ರಾಜಪ್ಪಗೌಡ ಬಂದು ಗಲಾಟೆ ಮಾಡಿದ್ದಾರೆ. ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ ಚಾಕು ತೆಗೆದು ತೀರ್ಥೇಶ್’ಗೆ ತಿವಿದಿದ್ದಾರೆ.
ಗಾಯಗೊಂಡಿದ್ದ ತೀರ್ಥೇಶ್ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shimoga District Profile | About Shivamogga Live | Shivamogga Live WhatsApp Number 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200