ಒಳ ಉಡುಪಿನಲ್ಲಿ ಗಾಂಜಾ ತಂದ ಅಧಿಕಾರಿ, ಸಿಕ್ಕಿಬಿದ್ದಿದ್ದು ಹೇಗೆ?

ಶಿವಮೊಗ್ಗ: ತಪಾಸಣೆ ವೇಳೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯ ಒಳ ಉಡುಪಿನಲ್ಲಿ ಗಾಂಜಾ ಪತ್ತೆಯಾಗಿದೆ. ಅಧಿಕಾರಿಯನ್ನು ವಶಕ್ಕೆ ಪಡೆದು ತುಂಗಾ ನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜೈಲಿನ ಎಫ್‌.ಡಿ.ಎ ಸಾತ್ವಿಕ್‌ (25) ಬಂಧಿತ. ಗುರುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಾತ್ವಿಕ್‌ನನ್ನು ತಪಾಸಣೆ ಮಾಡಿದಾಗ ಒಳ ಉಡುಪಿನಲ್ಲಿ ಗಪ್‌ ಟೇಪ್‌ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು. ಪರಿಶೀಲಿಸಿದಾಗ 170 ಗ್ರಾಂ ಗಾಂಜಾ ಸಿಕ್ಕಿದೆ. ಘಟನೆ ಕುರಿತು ಕೆ.ಎಸ್‌.ಐ.ಎಸ್‌.ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿ.ಎಸ್‌.ಐ ಪ್ರಭು, ಸಿಬ್ಬಂದಿ ಕುಪ್ಪೇರ ಬಸವರಾಜ್‌ ಅವರು ಜೈಲು ಅಧೀಕ್ಷಕ ಡಾ. ರಂಗನಾಥ್‌ ಅವರ ಗಮನಕ್ಕೆ ತಂದಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಘಟನೆ ಸಂಬಂಧ ಡಾ. ರಂಗನಾಥ್‌ ಅವರು ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ

Leave a Comment