ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JANUARY 2024
SHIMOGA : ಎರಡು ಲಕ್ಷ ರೂ.ವರೆಗೆ ಸುಲಭವಾಗಿ ಸಾಲ ದೊರೆಯಲಿದೆ ಎಂದು ಫೇಸ್ಬುಕ್ನಲ್ಲಿದ್ದ ಜಾಹೀರಾತು ನಂಬಿ ಕರೆ ಮಾಡಿದ್ದ ಭದ್ರಾವತಿ ಯುವಕನಿಗೆ (ಹೆಸರು ಗೌಪ್ಯ) 36,500 ರೂ. ವಂಚನೆಯಾಗಿದೆ.
ಜಾಹೀರಾತಿನಲ್ಲಿದ್ದ ಮೊಬೈಲ್ ನಂಬರ್ಗೆ ಭದ್ರಾವತಿಯ ಯುವಕ ಕರೆ ಮಾಡಿದ್ದ. ಅತ್ತ ಕಡೆಯಿಂದ ಮಾತನಾಡಿದ ವ್ಯಕ್ತಿ ತಾವು ಮಂಗಳೂರಿನ ಫೈನಾನ್ಸ್ ಸಂಸ್ಥೆ ಎಂದು ಪರಿಚಯಿಸಿಕೊಂಡಿದ್ದ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ವಿವರ, ಪ್ಯಾನ್ ಕಾರ್ಡ್ ವಾಟ್ಸಪ್ ಮಾಡುವಂತೆ ತಿಳಿಸಿದ್ದ. ದಾಖಲೆಗಳನ್ನು ಕಳುಹಿಸುತ್ತಿದ್ದಂತೆ ಸಾಲ ಸ್ಯಾಂಕ್ಷನ್ ಆಗಿದೆ. ಇದರ ಪ್ರೋಸೆಸ್ ಫೀಜ್, ಟ್ಯಾಕ್ಸ್ ಸೇರಿದಂತೆ ನಾನಾ ಕಾರಣಕ್ಕೆ 36,500 ರೂ. ಪಾವತಿಸಬೇಕು ಎಂದು ತಿಳಿಸಿದ್ದ.
ಇದನ್ನೂ ಓದಿ – ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ
ಇದನ್ನು ನಂಬಿದ ಭದ್ರಾವತಿ ಯುವಕ 36,500 ರೂ. ಪಾವತಿಸಿದ್ದ. ಆದರೂ ಸಾಲದ ಹಣ ಬಾರದಿದ್ದಾಗ ವಂಚನೆಗೊಳಗಾಗಿದ್ದು ಅರಿವಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





