ಫೈನಾನ್ಸ್‌ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JANUARY 2024

SHIMOGA : ಎರಡು ಲಕ್ಷ ರೂ.ವರೆಗೆ ಸುಲಭವಾಗಿ ಸಾಲ ದೊರೆಯಲಿದೆ ಎಂದು ಫೇಸ್‌ಬುಕ್‌ನಲ್ಲಿದ್ದ ಜಾಹೀರಾತು ನಂಬಿ ಕರೆ ಮಾಡಿದ್ದ ಭದ್ರಾವತಿ ಯುವಕನಿಗೆ (ಹೆಸರು ಗೌಪ್ಯ) 36,500 ರೂ. ವಂಚನೆಯಾಗಿದೆ.

ಜಾಹೀರಾತಿನಲ್ಲಿದ್ದ ಮೊಬೈಲ್‌ ನಂಬರ್‌ಗೆ ಭದ್ರಾವತಿಯ ಯುವಕ ಕರೆ ಮಾಡಿದ್ದ. ಅತ್ತ ಕಡೆಯಿಂದ ಮಾತನಾಡಿದ ವ್ಯಕ್ತಿ ತಾವು ಮಂಗಳೂರಿನ ಫೈನಾನ್ಸ್‌ ಸಂಸ್ಥೆ ಎಂದು ಪರಿಚಯಿಸಿಕೊಂಡಿದ್ದ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ವಿವರ, ಪ್ಯಾನ್‌ ಕಾರ್ಡ್‌ ವಾಟ್ಸಪ್‌ ಮಾಡುವಂತೆ ತಿಳಿಸಿದ್ದ. ದಾಖಲೆಗಳನ್ನು ಕಳುಹಿಸುತ್ತಿದ್ದಂತೆ ಸಾಲ ಸ್ಯಾಂಕ್ಷನ್‌ ಆಗಿದೆ. ಇದರ ಪ್ರೋಸೆಸ್‌ ಫೀಜ್‌, ಟ್ಯಾಕ್ಸ್‌ ಸೇರಿದಂತೆ ನಾನಾ ಕಾರಣಕ್ಕೆ 36,500 ರೂ. ಪಾವತಿಸಬೇಕು ಎಂದು ತಿಳಿಸಿದ್ದ.

ಇದನ್ನೂ ಓದಿ – ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ

ಇದನ್ನು ನಂಬಿದ ಭದ್ರಾವತಿ ಯುವಕ 36,500 ರೂ. ಪಾವತಿಸಿದ್ದ. ಆದರೂ ಸಾಲದ ಹಣ ಬಾರದಿದ್ದಾಗ ವಂಚನೆಗೊಳಗಾಗಿದ್ದು ಅರಿವಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2024

Leave a Comment